ಮೈಸೂರು
ಸಿಎಂ ಆಗಮನ; ಮೈಸೂರಿನ ಹಲವೆಡೆ ಟ್ರಾಫಿಕ್ ಜಾಮ್

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಗಮನದ ಪರಿಣಾಮ ಮೈಸೂರು ಹಲವು ವೃತ್ತಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಆಯಿತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.
ಪ್ರಮುಖ ವೃತ್ತಗಳಲ್ಲಿ ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಯಿತು. ಪರಿಣಾಮವಾಗಿ ಕಿಲೋ ಮೀಟರ್ಗಟ್ಟಲೇ ವಾಹನ ದಟ್ಟಣೆ ಏರ್ಪಟ್ಟಿತು. ತುರ್ತು ಕಾರ್ಯಗಳಿಗೆ ತೆರಳುತ್ತಿದ್ದವರು ದಟ್ಟಣೆಯಿಂದ ಕಿರಿಕಿರಿ ಅನುಭವಿಸಿದರು.




