ಜಿಲ್ಲಾ ಸುದ್ದಿ

ಗೋಣಿಕೊಪ್ಪಲು ಆಸ್ಪತ್ರೆಗೆ ಅಂಬ್ಯುಲೆನ್ಸ್ ಕೊಡುಗೆ

ದಾನಿಗಳು, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಅಜ್ಜಿಕುಟ್ಟಿರ ಪೊನ್ನಣ್ಣ ಗೋಣಿಕೊಪ್ಪಲುವಿನ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಿರುವ ಅಂಬ್ಯುಲೆನ್ಸ್ ಮತ್ತು ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದ್ಯಕ್ಷರಾದ ಧ್ರುವ ನಾರಾಯಣ್ ಅಂಬ್ಯುಲೆನ್ಸ್ ಕೀ ನೀಡುವ ಮೂಲಕ ಹಸ್ತಾಂತರಿಸಿದರು.

ನಂತರ ಮಾತನಾಡಿದ ಧ್ರುವ ನಾರಾಯಣ್ ರಾಜ್ಯದ 224 ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೋವಿಡ್ ಸೇವೆ ಮಾಡುತ್ತಿದ್ದಾರೆ. ಅಲ್ಲದೆ 200 ಕ್ಕೂ ಅಧಿಕ ಅಂಬ್ಯುಲೆನ್ಸ್ ಕೊಡುಗೆಯಾಗಿ ರಾಜ್ಯದ ಕಾಂಗ್ರೆಸ್ ಮುಖಂಡರು ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದ್ಯಕ್ಷರಾದ ಧ್ರುವ ನಾರಾಯಣ್ ತಿಳಿಸಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ನAmbulanceಡೆದ ಕಾರ್ಯಕ್ರಮದಲ್ಲಿ ದಾನಿಗಳು, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಅಜ್ಜಿಕುಟ್ಟಿರ ಪೊನ್ನಣ್ಣ ಮಾತನಾಡಿ ಕಾವೇರಿ ತಾಯಿಯ ಮಣ್ಣಿನಲ್ಲಿ ಹುಟ್ಟಿ ಇಲ್ಲಿಗೆ ಏನಾದರೂ ಸೇವೆ ಮಾಡಬೇಕು ಎಂದು ಬಯಸಿದ್ದೆ.ಇದೀಗ ಕೋವಿಡ್ ಸಂದರ್ಭದಲ್ಲಿ ಅವಕಾಶ ಬಂದಿದೆ ಆ ನಿಟ್ಟಿನಲ್ಲಿ ಜನರಿಗೆ ಅತ್ಯವಶ್ಯವಾದ ಸುಸಜ್ಜಿತವಾದ ಅಂಬ್ಯುಲೆನ್ಸ್ ,ಆಕ್ಸಿಜನ್ ಕಾನ್ಸೆಂಟ್ರೇಟರ್,ಮಾಸ್ಕ್, ಸ್ಯಾನಿಟೈಸ್ ಹಾಗೂ ಆಹಾರ ಕಿಟ್ ಗಳನ್ನು ವಿಧಾನ ಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನೀಡುತ್ತಿದ್ದೇವೆ, ಅಂಬ್ಯುಲೆನ್ಸ್ ಸೇವೆಯನ್ನು ಉಚಿತವಾಗಿ ಪಡೆಯಬಹುದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದನ್ನು ನಿರ್ವಹಣೆ ಮಾಡಲಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ ಕಾಂಗ್ರೆಸ್ ಪಕ್ಷ ಆರಂಭಿಕ ದಿನಗಳಿಂದ ಉತ್ತಮ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ.ಆದರೆ ಬಿಜೆಪಿ ಪಕ್ಷ ಇದನ್ನು ಟೀಕೆ ಮಾಡುವುದನ್ನು ಕಡಿಮೆ ಮಾಡಿಲ್ಲ,ಆಡಳಿತ ಪಕ್ಷ ಉತ್ತಮ ರೀತಿಯಲ್ಲಿ ಕೆಲಸ ಮಾಡದೇ ಇರುವುದರಿಂದ ಕೋವಿಡ್ ಸಮಸ್ಯೆ ಇಷ್ಟು ಗಂಭೀರವಾಗಲೂ ಕಾರಣ ಎಂದು ಆರೋಪಿಸಿದರು.

ತಾಲ್ಲೂಕು ವೈದ್ಯಾದಿಕಾರಿಗಳಾದ ಡಾ.ಯತೀರಾಜ್ ರವರಿಂದ ಅಂಬ್ಯುಲೆನ್ಸ್ ಕೀ ಹಸ್ತಾಂತರ ಮಾಡಲಾಯಿತು.ಈ ವೇಳೆ ಸರ್ಕಲ್ ಇನ್ಸ್ಪೆುಕ್ಟರ್ ಜಯರಾಂ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಜರಿದ್ದರು.

ಇದೇ ಸಂದರ್ಭ ವಿರಾಜಪೇಟೆಯ ಸೆರಿನಿಟಿ ಹಾಲ್ ಮತ್ತು ನಾಪೋಕ್ಲುವಿನಲ್ಲಿ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ವಿಕಲಾಂಗ ಚೇತನರಿಗೆ ಪಡಿತರ ಕಿಟ್ ವಿತರಿಸಿದರು. ಸಾವಿರಕ್ಕೂ ಅಧಿಕ ಫಲಾನುಭವಿಗಳು ಪ್ರಯೋಜನ ಪಡೆದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಪಕ್ಷದ ಮುಖಂಡರಾದ ಶಾಹಿದ್,ಅರುಣ್ ಮಾಚಯ್ಯ, ಅಬ್ದುಲ್ ರೆಹಮಾನ್ ಬಾಪು, ಕೇಚಮಾಡ ಸರಿತಾ ಪೂಣಚ್ಚ, ತೆರಸ ವಿಕ್ಟರ್, ಅಜಿತ್ ಅಯ್ಯಪ್ಪ, ಪಿ.ಆರ್.ಪಂಕಜ, ಬಿ.ಎನ್.ಪ್ರಥ್ವಿ, ಟಾಟು ಮೊಣ್ಣಪ್ಪ, ಪ್ರಮೋದ್ ಗಣಪತಿ, ಸೇರಿದಂತೆ ಇನ್ನಿತರ ಪ್ರಮುಖರು, ವಿವಿಧ ಭಾಗದಿಂದ ಆಗಮಿಸಿದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button