Latestಜಿಲ್ಲಾ ಸುದ್ದಿರಾಜಕೀಯರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ

ದೇಶದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಧಾರವಾಡ: ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಒಡೆದು ಮನೆಯಾಗಿದೆ. ರಾಜ್ಯದಲ್ಲಿಯು ಕೂಡಾ ಕಾಂಗ್ರೆಸ್ ಅದೇ ಪರಿಸ್ಥಿತಿಯಲ್ಲಿ ಇದೆ. ಅದರ ಬಗ್ಗೆ ಡಿಕೆ ಶಿವಕುಮಾರ್ ಅವರು ಗಮನ ಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟಾಂಗ್​ ನೀಡಿದರು.

ಹುಬ್ಬಳ್ಳಿ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು, ಹಾನಗಲ್ ಚುನಾವಣೆ ಬಳಿಕ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಡಿ.ಕೆ ಶಿವಕುಮಾರ್​ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ. ‌ಆದರೆ, ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ.‌ ಅದರ ಬಗ್ಗೆ ಶಿವಕುಮಾರ್​ ಗಮನಹರಿಸಲಿ‌ ಎಂದರು.

ಮಾಧ್ಯಮದವರ ಮೇಲೆ ಸಿಎಂ ಗರಂ:

ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಅಹ್ವಾನಿಸಿದಾಗ, ಸಿಎಂ ಗರಂ ಆದ ಪ್ರಸಂಗ ನಡೆಯಿತು. ಸಿಕ್ಕ ಸಿಕ್ಕಲ್ಲಿ ಇದನ್ನ ರೂಢಿ ಮಾಡಿಕೊಳ್ಳಬೇಡಿ ಎಂದು ಮಾಧ್ಯಮವರಿಗೆ ಹೇಳಿ ನಂತರ ಮುಂದಕ್ಕೆ ತೆರಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button