ಜಿಲ್ಲಾ ಸುದ್ದಿಮೈಸೂರುರಾಜಕೀಯ

ನೆರೆ ಪರಿಹಾರಕ್ಕೆ ಜೇಬಿನಲ್ಲಿ ದುಡ್ಡು ಇಟ್ಕೊಂಡು ಓಡಾಡುವುದಿಲ್ಲ: ಎಂಎಲ್ಸಿ ರವಿಕುಮಾರ್ ಬೇಜವಾಬ್ದಾರಿ ಉತ್ತರ

ಮೈಸೂರು: ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದರೂ ನೆರೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ವಿಪಕ್ಷಗಳ ಟೀಕೆಗೆ ಜೇಬಿನಲ್ಲಿ ದುಡ್ಡು ಹಿಟ್ಕೊಂಡು ಓಡಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ನಿಯಮಾನುಸಾರ ಹಾನಿ ವರದಿ ಸಂಗ್ರಹಿಸಿ ಪರಿಹಾರ ನೀಡುತ್ತಾರೆ. ಕಾನೂನಾತ್ಮಕವಾಗಿ ನೆರೆ ಪರಿಹಾರ ನೀಡಲಾಗುವುದು‌.  ಕಾಂಗ್ರೆಸ್ ಪಕ್ಷ ಒಂದು ನಿರುದ್ಯೋಗಿಗಳ ಕೂಟ ಎಂದರು.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಟೀಕೆ ಮಾಡುವುದಷ್ಟೇ ಕೆಲಸ ಎಂದು ವ್ಯಂಗ್ಯವಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 15ರಿಂದ 16ಸ್ಥಾನಗಳು ಬಿಜೆಪಿ ಗೆಲ್ಲುತ್ತದೆ. ವಿಧಾನ ಪರಿಷತ್ ನಲ್ಲಿ ಬಹುಮತ ಸಾಬೀತು ಮಾಡಲು 12 ಸ್ಥಾನಗಳು ಮಾತ್ರ ಅವಶ್ಯಕತೆ ಇದೆ. ಈ ಬಾರಿಯ ಚುನಾವಣೆಯಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಬಹುಮತ ಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆದ ಜನಸ್ವರಾಜ್ ಯಾತ್ರೆ ಯಶಸ್ವಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಅವಶ್ಯಕತೆ ಇಲ್ಲ. ಈಗಾಗಲೇ ಜೆಡಿಎಸ್ 7ಕ್ಷೇತ್ರಗಲ್ಲಿ‌ ಮಾತ್ರ ಸ್ಪರ್ಧಿಸಿದೆ‌. ಉಳಿದ ಸ್ಥಾನಗಳಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾಗೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಹಾಗಾಗಿ ಈ ಬಾರಿಯ ಪರಿಷತ್ ಚುನಾವಣೆಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡುತ್ತೇವೆ ಎಂದು ರವಿಕುಮಾರ್ ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button