Breaking NewsLatestಮೆಟ್ರೋರಾಜ್ಯಸುದ್ದಿ
ಭವ್ಯ ಭವಿಷ್ಯದ ಭರವಸೆಯ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಧಾನಸೌಧದಲ್ಲಿ ಜನಕಲ್ಯಾಣ ಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ 6 ತಿಂಗಳ ಸಾಧನೆ ಪುಸ್ತಕ ಭವ್ಯಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಪುಸ್ತಕ ಬಿಡುಗಡೆ ಮಾಡಿದರು.
ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಟ್ವಿಟರ್ನಲ್ಲಿ ಶುಭ ಹಾರೈಸಿದ್ದಾರೆ. ಜೊತೆಗೆ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದೆ. ಈ ಹಿನ್ನೆಲೆಯುಲ್ಲಿ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತ್ತು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ ಭೈರತಿ ಬಸವರಾಜ್, ಉಮೇಶ್ ಕತ್ತಿ, ಡಾ.ಕೆ. ಸುಧಾಕರ್ ಗೋಪಾಲಯ್ಯ,ಕೆಎಸ್ ಈಶ್ವರಪ್ಪ ಎಂಟಿಬಿ ನಾಗರಾಜ್ ಎಸ್. ಟಿ ಸೋಮಶೇಖರ್, ಬಿಸಿ ನಾಗೇಶ್ ಸಂಸದ ಪಿಸಿ ಮೋಹನ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು.
