Breaking NewsLatestಕ್ರೈಂಜಿಲ್ಲಾ ಸುದ್ದಿಮೈಸೂರುರಾಜ್ಯಸುದ್ದಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಇನ್ಸೆಪೆಕ್ಟರ್ ಅಮಾನತು!

ಮೈಸೂರು: ವಿಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದಡಿ ಮಾರ್ಚ್ 16ರಂದು ಎಸಿಬಿ ಅಧಿಕಾರಿಗಳು ಬಾಲಕೃಷ್ಣ ಅವರ ನಿವೇಶನದ ಮೇಲೆ ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿರುವ ದಾಖಲೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ರೆ, ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಮಾಡಿರುವ ಆರೋಪದಲ್ಲಿ ಹುರುಳಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ನ್ಯಾಯಾಲಯ ವಿಚಾರಣೆ ನಡೆಸಿ ಬಾಲಕೃಷ್ಣ ನಿರ್ಧೋಷಿ ಎಂದು ಸಾಬೀತು ಪಡಿಸಬೇಕಿದೆ. ಪ್ರಸ್ತುತ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿ ಬಾಲಕೃಷ್ಣ ಅವರನ್ನು ಅಮಾನತು ಮಾಡಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
