Breaking NewsLatestಜಿಲ್ಲಾ ಸುದ್ದಿವಿಜಯಪುರ
ಹಬ್ಬದ ದಿನವೇ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು!

ವಿಜಯಪುರ: ಕೆಎಸ್ ಆರ್ ಟಿಸಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನಗೂಳಿ ಸಮೀಪ ನಡೆದಿದೆ.
ವಿಜಯಪುರದಿಂದ ತಾಳಿಕೋಟೆ ಕಡೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗದಲ್ಲಿ ಬೈಕ್ ಸಿಲುಕಿದ್ದು, ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿವೆ. ಸ್ಥಳಕ್ಕೆ ಮನಗೊಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
