Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ: ಪೋಸ್ಟ್‌ ಬಗ್ಗೆ ನಟ ಚೇತನ್‌ ಸ್ಪಷ್ಟನೆ

ಬೆಂಗಳೂರು : ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್‌ ವಿಚಾರದ ಬಗ್ಗೆ ಬೆಂಗಳೂರಲ್ಲಿ ನಟ ಚೇತನ್‌ ಮಾತನಾಡಿ ʻ ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಿಂದೂ ಧರ್ಮಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕೊರಗ ಪಂಪದ ಎಂಬುವುದು ಬೇರೆ ಸಮುದಾಯವಿದೆ. ಭೂತಾರಾಧನೆಯಲ್ಲಿ ಆದಿವಾಸಿಗಳುʻಆಚರಿಸುತ್ತಾರೆ ಭೂತಾರಾಧನೆಯಲ್ಲಿ ಬ್ರಾಹ್ಮಣ್ಯ ಎಂಬುದು ಇಲ್ಲ. ಕೊರಗ ಸಮುದಾಯ ಮೂಲಕ ನಿವಾಸಿಗಳ ಸಮುದಾಯ. ಕೊರಗರನ್ನು ಈಗಲೂ ಆಗ ಭಾಗದಲ್ಲಿ ಅಸ್ಪ್ಯ ಶ್ಯರಂತೆ ನೋಡುತ್ತಾರೆ .

ಕೊರಗ ಸಮುದಾಯಕ್ಕೆ ಅವರದ್ದೇ ಆದ ಸಂಸ್ಕೃತಿ ಇದೆ. ಈ ಮೂಲ ನಿವಾಸಿಗಳು ಬ್ರಾಹ್ಮಣ್ಯಕ್ಕೆ ಒಳಪಡುವುದಲ್ಲ. ಭೂತಕೋಲ ಅನ್ನೋದು ಹಿಂದೂ ಧರ್ಮದಲ್ಲಿ ಬರುತ್ತೆ ಅನ್ನೋದು ತಪ್ಪು, ಹಿಂದೂ ಅನ್ನೊದನ್ನು ಹೇಗೆ ಬಳಸುತ್ತೇವೆ ಅನ್ನೋದು ಮುಖ್ಯ, ʼಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಎಂದು ನಟ ಚೇತನ್‌ ಸ್ಪಷ್ಟನೆ ನೀಡಿದ್ದಾರೆ.

ಕಾಂತಾರ ಚಿತ್ರ ಕುರಿತು ವಿವಾದವೇನು ?

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.

ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್‌ ಕಿಡಿ ಕಾರಿದ್ದಾರೆ.

ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್‌ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್‌ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ. ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ನಟ ಚೇತನ್‌ ಸ್ಪಷ್ಟನೆ ನೀಡುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button