ಜೀ ಕನ್ನಡದ ರಾಘವೇಂದ್ರ ಹುಣಸೂರು ವಿರುದ್ಧ ಭಟ್ರು ಗರಂ!

ಜೀ ಕನ್ನಡ ವಾಹಿನಿಯಲ್ಲಿ ಡ್ರಾಮಾ, ಕಾಮಿಡಿ ಕಿಲಾಡಿಗಳು ರೀತಿಯ ಕಾರ್ಯಕ್ರಮಗಳಿಗೆ ಜಡ್ಜ್ ಆಗಿ ವೀಕ್ಷಕರ ಫೇವರಿಟ್ ಜಡ್ಜ್ ಆಗಿದ್ದ ಯೋಗರಾಜ್ ಭಟ್ ಈಗ ಅದೇ ವಾಹಿನಿಯ ಮನರಂಜನೆಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ವಿರುದ್ಧ ಕಿಡಿಕಾರಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತಾವು ನಿರ್ದೇಶಿಸಿರುವ ಮುಂದಿನ ಚಿತ್ರಗಳ ಡಿಜಿಟಲ್ ಹಕ್ಕನ್ನು ಖರೀದಿಸುವುದಾಗಿ ಹೇಳಿದ್ದ ರಾಘವೇಂದ್ರ ಹುಣಸೂರು ಈಗ ಸ್ಪಂದಿಸುತ್ತಿಲ್ಲ ಎಂಬ ಕಾರಣಕ್ಕೆ ಯೋಗರಾಜ್ ಭಟ್ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.
ಈ ಸಂಬಂಧ ಎರಡು ಆಡಿಯೊಗಳು ವಾಟ್ಸಪ್ನಲ್ಲಿ ಹರಿದಾಡುತ್ತಿದ್ದು ಇದರಲ್ಲಿ ಯೋಗರಾಜ್ ಭಟ್ ಜೀ ಕನ್ನಡದ ರಾಘವೇಂದ್ರ ಹುಣಸೂರು ವಿರುದ್ಧ ಕಿಡಿಕಾರಿದ್ದಾರೆ. ಈ ಆಡಿಯೊದಲ್ಲಿ ಕೆಲ ಕೆಟ್ಟ ಪದಗಳ ಬಳಕೆಯೂ ಇದ್ದು ಸಹನಾಮೂರ್ತಿ ಆಗಿದ್ದ ಯೋಗರಾಜ್ ಭಟ್ ಈ ಇಷ್ಟರ ಮಟ್ಟಿಗೆ ಕೋಪಗೊಂಡಿರುವುದನ್ನು ಕೇಳಿದವರು ಆಶ್ಚರ್ಯಕ್ಕೊಳಗಾಗಿದ್ದಾರೆ.
“ರಾಘಪ್ಪ ನೀನು ಜೀ ಟಿವಿ ಉದ್ಧಾರ ಮಾಡಿದವನಾಗಿ ನಿನ್ನ ನಂಬಿಕೊಂಡಿರೋ ಇಂಡಸ್ಟ್ರಿಯವರನ್ನೂ ಉದ್ಧಾರ ಮಾಡಪ್ಪೋ. ಪದವಿಪೂರ್ವ ಅಂತ ಅಚ್ಚ ಕನ್ನಡದ ಚಿತ್ರ, ತುಂಬಾ ಅದ್ಭುತವಾಗಿ ಬಂದಿದೆ. ಈ ಚಿತ್ರದ ಟಿವಿ ಹಾಗೂ ಡಿಜಿಟಲ್ ತಗೊತಿನಿ ಅಂತ ಹೇಳಿದ್ದೆ. ಅದರ ಪ್ರಪೋಸಲ್ ಕಳಿಸಿದ್ದೀನಿ, ಆದರೆ ಫೋನ್ ತೆಗೀತಾ ಇಲ್ಲ ನೀನು. ಈಗ ಚಿತ್ರವನ್ನು ತಗೊಳ್ತಿಯೋ ಇಲ್ವೋ ಕ್ಲಾರಿಟಿ ಬೇಕು, ತುಂಬಾ ಅರ್ಜೆಂಟ್ ಇದೆ, ಇನ್ನು ಹತ್ತು ನಿಮಿಷದಲ್ಲಿ ಕಾಲ್ ಮಾಡು. ಇಲ್ಲಾ ಅಂದ್ರೆ ಒಂದು ಆಡಿಯೋ ಕಳುಹಿಸುತ್ತೇನೆ ಆಮೇಲೆ ಬಯ್ಕೊಬೇಡ” ಎಂದು ತುಸು ಕೆಟ್ಟದಾಗಿಯೇ ವಾಟ್ಸಪ್ ಆಡಿಯೊ ಮೂಲಕ ಹೇಳಿದ್ದಾರೆ.
ಇದರ ಬೆನ್ನಲ್ಲೇ ಎರಡನೇ ಆಡಿಯೊ
ಇದೇ ಎರಡನೇ ಆಡಿಯೊದಲ್ಲಿ ತುಸು ಅಶ್ಲೀಲ ಶಬ್ದಗಳನ್ನು ಬಳಸಿ ಮಾತನಾಡಿರುವ ಭಟ್ರು ನಿಂಗೆ ಕಷ್ಟ ಅಂದಾಗ ನಮ್ಮತ್ರ ಬರ್ತಿಯ, ಅದೇ ನಮಗೆ ಅಗತ್ಯ ಬಿದ್ದಾಗ ಸಹಾಯ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ ಹಾಗೂ ಇದು ನನ್ನೊಬ್ಬನ ಆರೋಪವಲ್ಲ, ಮುಕ್ಕಾಲು ಭಾಗ ಚಿತ್ರರಂಗದ ಆರೋಪ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ “ನಾವೆಲ್ಲಾ ಕಾಲ್ ಮಾಡೋವಷ್ಟು ದೊಡ್ಡವನಲ್ಲ ನೀನು ತುಂಬಾ ಅಲ್ಪ, ಅದು ನಿಂಗೂ ಗೊತ್ತು ಇರಲಿ ಅಂತ ನೆನಪಿಸುತ್ತಿದ್ದೇನೆ” ಎಂದರು.
ನೀನು ಬೆಳೆಯೋ ಮಗ ಅಲ್ಲ! ಇನ್ನೂ ಮುಂದುವರಿದು ಮಾತನಾಡಿರುವ ಭಟ್ರು “ಯಾವ ಇಂಡಸ್ಟ್ರಿ ಚಿತ್ರಗಳನ್ನು ಬಳಸಿಕೊಂಡು ನಾವು ಟಿಆರ್ಪಿಯಲ್ಲಿ ಮುಂದು ಅಂತ ಮೆರೆಯುತ್ತೀಯೋ ಅದೇ ಇಂಡಸ್ಟ್ರಿಯವರ ಫೋನ್ ತೆಗೆಯಲ್ಲ ನೀನು ಅಂದರೆ ನೀನು ತುಂಬಾ ಬೆಳೆದಿದ್ದೀಯ ಅಂತ ಅರ್ಥ, ಇಲ್ಲ ನಾವು ಸತ್ತಿದ್ದೀವಿ ಅಂತ ಅರ್ಥ. ನೀ ಯಾವುದೇ ಕಾರಣಕ್ಕೂ ಬೆಳೆಯೋ ಮಗ ಅಲ್ಲ, ನಾವು ಸಾಯೋ ಮಂದಿ ಅಲ್ಲ ನಂಗೊತ್ತು. ನಿನ್ನಂತವರನ್ನೆಲ್ಲಾ ಹೂತೇ ಲೇಟಾಗಿ ಹೋಗ್ತೀನಿ. ನಿನ್ನ ಅವನತಿ ಶುರುವಾಗಿದೆ ಕಣೋ. ಬೀಳ್ತಿಯ ಆದ್ರೆ ಯಾವ ಹೈಟ್ನಿಂದ ಅಂತ ಗೊತ್ತಿಲ್ಲ. ಎಲ್ಲಾ ರೀತಿಯಲ್ಲೂ ದಬಾರ್ ಅಂತ ಬೀಳ್ತಿಯ, ಬಿದ್ದಾಗ ನಾಲ್ಕು ಜನ ಬರ್ತಾರೆ, ನನ್ನ ಕರ್ಮ ನಾನು ಬರ್ತೀನಿ, ಎತ್ತುತ್ತೀನಿ ಟಮಟೆ ಡಾನ್ಸ್ ಬೇಕದ್ರಾ ಮಾಡ್ತಿನಿ, ಆದರೆ ನಿನ್ನ ಜೊತೆ ವ್ಯವಹಾರ ಮಾತ್ರ ಬೇಡ” ಎಂದು ಆಕ್ರೋಶ ಹೊರಹಾಕಿದ್ದಾರೆ.
