Breaking NewsLatestರಾಷ್ಟ್ರೀಯಸುದ್ದಿ

ಬಿ.ಎಲ್.ಸಂತೋಷ್’ಗೆ ಬಿಗ್ ಶಾಕ್ 

ಹೈದರಾಬಾದ್ : ತೆಲಂಗಾಣದ ಆಡಳಿತಾರೂಢ ಟಿಆರ್ ಎಸ್ ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ತುಷಾರ್ ವೆಲ್ಲಪಲ್ಲಿ ಮತ್ತು ಜಗ್ಗು ಸ್ವಾಮಿ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.

ತೆಲಂಗಾಣ ಶಾಸಕರ ಖರೀದಿ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗುವಂತೆ ಬಿ.ಎಲ್. ಸಂತೋಷ್, ತುಷಾರ್ ವೆಲ್ಲಪಲ್ಲಿ ಮತ್ತು ಜಗ್ಗು ಸ್ವಾಮಿ ಎಸ್‌ಐಟಿ ಸಮನ್ಸ್ ನೀಡಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಎಸ್ ಐಟಿ ಲುಕ್ ಔಟ್ ನೋಟಿಸ್ ನೀಡಿದೆ.

ಕೇರಳ ಮೂಲದ ವೈದ್ಯ ಜಗ್ಗು ಸ್ವಾಮಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು,ಟಿಆರ್ ಎಸ್ ನ ನಾಲ್ವರು ಶಾಸಕರನ್ನು ಬಿಜೆಪಿಗೆ ಪಕ್ಷಾಂತರ ಮಾಡಲು ಆಮಿಷವೊಡ್ಡುವ ಪಿತೂರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಲುಕ್‌ಔಟ್ ನೋಟಿಸ್ನಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button