
ಮುಂಬೈ: ಮಹಾರಾಷ್ಟ್ರದಲ್ಲಿ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಅವಧಿಗೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ.
ಇಂದು ಮುಂಗಾರು ಅಧಿವೆಶನ ಆರಂಭವಾಗುತ್ತಿದ್ದಂತೆಯೇ ಇಂತದೊಂದು ಬೆಳವಣಿಗೆಗೆ ಮಹಾರಾಷ್ಟ್ರ ವಿಧಾನಸಭೆ ಸಾಕ್ಷಿಯಾಯಿತು. ಬಿಜೆಪಿ ಶಾಸಕರು ಪ್ರಿಸೈಡಿಂಗ್ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅಲ್ಲಗಳೆದಿದ್ದಾರೆ.
ಸ್ಥಳೀಯ ಚುನಾವಣೆಗಳಲ್ಲಿ ರಾಜಕೀಯ ಮೀಸಲಾತಿ ಒದಗಿಸುವ ನಿರ್ಣಯವನ್ನು ಮಹಾ ವಿಕಾಸ್ ಅಗಾಢಿ ಮಂಡಿಸಿದಾಗ ಇದಕ್ಕೆ ಬಿಜೆಪಿ ಶಾಸಕರಿಂದ ಆಕ್ಷೇಪ ವ್ಯಕ್ತವಾಯಿತು. ಈ ವೇಳೆ ನಡೆದ ಗದ್ದಲದಲ್ಲಿ ಹದ್ದು ಮೀರಿದರೆಂಬ ಕಾರಣಕ್ಕೆ ಅಸಭ್ಯ ವರ್ತನೆ ಆರೋಪದ ಮೇಲೆ ಸಾಸಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.



