ಮೆಟ್ರೋರಾಜ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್‌ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.

ಸುರೇಶ್‌ ಕುಮಾರ್‌ ಅವರು ಉತ್ತಮ ಸಲಹೆ ನೀಡಿದ್ದಾರೆ. ಎಂಜಿನೀಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಇಂತಿಷ್ಟು ಅಂಕಗಳನ್ನು ಪಡೆಯಬೇಕಾಗಿತ್ತು. ಈಗ ಆ ಅಂಕ ಪರಿಗಣಿಸುವ ಬದಲು ಸಿಇಟಿ ರಾಂಕ್‌ ಪರಿಗಣಿಸುವ ಸಲಹೆಯನ್ನು ಅವರು ನೀಡಿದ್ದಾರೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು, ಉನ್ನತ ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಲ್ಲದೆ, ಈ ಬದಲಾವಣೆ ಮಾಡಬೇಕಾದರೆ ಕಾಯ್ದೆಯ ತಿದ್ದುಪಡಿಯನ್ನೂ ಮಾಡಬೇಕು. ಈ ಬಗ್ಗೆ ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಗಳ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button