ಮೆಟ್ರೋರಾಜ್ಯ

ವಿದ್ಯುತ್ ಬಿಲ್ ಅಕ್ರಮ ಹಿನ್ನೆಲೆ: ಮೂವರನ್ನು ಅಮಾನತು ಮಾಡಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟುಮಾಡಿದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಅಮಾನತುಪಡಿಸಿದ್ದಾರೆ.

ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ
ಅಮಾನತಿಗೊಳಗಾದ ಸಿಬ್ಬಂದಿಯಾಗಿದ್ದಾರೆ.

ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು .

ಪ್ರಸ್ತುತ ಈ ಮೂವರು ಸಿಬ್ಬಂದಿ ಗಳು ಬೇರೆ, ಬೇರೆ ಐ ಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐ ಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯನ್ನು ಸಹ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button