ಮೆಟ್ರೋ

ಸಾರಿಗೆ ನೌಕರರ ಮುಷ್ಕರದ ಸುಳಿವು; ನಿಷೇಧಿಸಿ ಸರ್ಕಾರ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮತ್ತೆ ಮುಷ್ಕರ ಹೂಡಲಿದ್ದಾರೆ ಎಂಬ ಸುಳಿವು ಸಿಕ್ಕಿದ್ದು. ಲಾಕ್​ಡೌನ್​ ಮುಗಿದ ಮೇಲೆ  ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಕೊವಿಡ್ ಸಂಕಷ್ಟದಲ್ಲಿ ಜನರ ಸಾಕಷ್ಟು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರನೇ ವೇತನ ಆಯೋಗ ಜಾರಿ ಮಾಡಬೇಕು. ಎಂದು ಆಗ್ರಹಿಸಿ, ಕಳೆದ ಎಪ್ರಿಲ್ 7 ರಿಂದ ನಡೆಯುತ್ತಿದ್ದ ಮುಷ್ಕರವನ್ನು ಹೈಕೋರ್ಟ್ ಅದೇಶಕ್ಕೆ ಮಣಿದು ಸಾರಿಗೆ ನೌಕರರ ಸಂಘಟನೆಯು 15 ದಿನಗಳ ನಂತರ ಸ್ಥಗಿತಗೊಳಿಸಿತ್ತು. ಆಗ ಸರ್ಕಾರ ಮುಷ್ಕರದಲ್ಲಿ ಭಾಗಿಯಾಗಿದ್ದವರನ್ನು ವರ್ಗಾವಣೆ, ಅಮಾನತು, ಸಸ್ಪೆಂಡ್ ಮಾಡಿ ಮುಷ್ಕರವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button