ಮೆಟ್ರೋರಾಜ್ಯ

ರಾಜ್ಯದಲ್ಲಿ ಜೂನ್​​​ 14ರ ವರೆಗೆ ಲಾಕ್​​​​​ ಡೌನ್​​​ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ಲಾಕ್​​ಡೌನ್​​​​ ಇನ್ನೂ ಜೂನ್ 14ರವರೆಗೆ ವಿಸ್ತರಣೆ ಮಾಡಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೆ ಲಾಕ್ಡೌನ್ ಜಾರಿಯಲ್ಲಿತ್ತು. ಪ್ರಕರಣಗಳು ಕಡಿಮೆಯಾಗುತ್ತಿವೆಯಾದರೂ ವ್ಯಾಪಿಸುತ್ತಿರುವ ಸರಪಳಿಯನ್ನು ಇನ್ನಷ್ಟು ಕಡಿತಗೊಳಿಸಬೇಕೆಂದರೆ ಲಾಕ್​ಡೌನ್​​​​​ ಅನಿವಾರ್ಯವಾಗಿದ್ದು ಜೂನ್​​​ 14ರ ಬೆಳಗ್ಗೆ 6 ಗಂಟೆವರೆಗೆ ಲಾಕ್​ಡೌನ್​​​​ ವಿಸ್ತರಣೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ 500 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಆಶಾಕಾರ್ಯಕರ್ತೆಯರಿಗೆ, ಮೀನುಗಾರರಿಗೆ, ಅರ್ಚಕರಿಗೆ ಅಡುಗೆ ಕೆಲಸಗಾರರಿಗೆ ತಲಾ 3 ಸಾವಿರ ಪರಿಹಾರ ಹಾಗೂ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ತಲಾ 2 ಸಾವಿರ ಪರಿಹಾರವನ್ನ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.

ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುಧಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button