Breaking NewsLatestರಾಜ್ಯಸುದ್ದಿ

ನೂತನ ಎಎಪಿ ಕೌನ್ಸಿಲರ್‌ಗಳನ್ನು ಬೇಟೆಯಾಡಲು ಯತ್ನಿಸುತ್ತಿರುವ ಬಿಜೆಪಿ: ದೆಹಲಿ ಡಿಸಿಎಂ ಆರೋಪ

ದೆಹಲಿ: ಮಹಾನಗರ ಪಾಲಿಕೆ ಚುನಾವಣೆ ಯಲ್ಲಿ ನೂತವಾಗಿ ಚುನಾಯಿತರಾದ ಎಎಪಿ ಕೌನ್ಸಿಲರ್‌ಗಳನ್ನು ತಮ್ಮತ್ತ ಸೆಳೆಯಲು ಬಿಜೆಪಿ  ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ , ಬಿಜೆಪಿಯ ಆಟಕ್ಕೆ ಯಾರೂ ಬಲಿಯಾಗುವುದಿಲ್ಲ ಎಂದು ಹೇಳಿದರು.

ಅಲ್ಲದೆ, ನೂತನ ಕೌನ್ಸಿಲರ್‌ಗಳಿಗೆ ದೂರವಾಣಿ ಕರೆಗಳು ಬಂದರೆ ಕರೆಯನ್ನು ರೆಕಾರ್ಡ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಂಡಿತು. 250 ವಾರ್ಡ್​ಗಳ ಪೈಕಿ ಕಾಂಗ್ರೆಸ್ ಪಕ್ಷವನ್ನು ಕೇವಲ 9 ಸ್ಥಾನಗಳಿಗೆ ಇಳಿಸಿದ ನಂತರ ಮನೀಶ್ ಸಿಸೋಡಿಯಾ ಅವರು ಈ ಆರೋಪ ಮಾಡಿದ್ದಾರೆ.

ಎಕ್ಸಿಟ್ ಪೋಲ್‌ಗಳಲ್ಲಿ ಭಾರಿ ಸೋಲು ಅನುಭವಿಸುವ ಮುನ್ಸೂಚನೆ ನೀಡಿದ್ದ ಬಿಜೆಪಿ 104 ಪುರಸಭೆಯ ವಾರ್ಡ್‌ಗಳನ್ನು ಗೆದ್ದು ಉತ್ಸಾಹದಿಂದ ಹೋರಾಟ ನಡೆಸಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ 132 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ.ಅದೇ ವೇಳೆ 15 ವರ್ಷಗಳ ಕಾಲ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 102, ಕಾಂಗ್ರೆಸ್ 9 ಸೀಟು ಗಳಿಸಿದೆ. 12 ಪಕ್ಷೇತರರು ಕೂಡಾ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button