Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿ

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಕಾರವಾರ : ಅತಿವೃಷ್ಟಿಯಿಂದ ಹಾನಿಗೊಳಗಾದ ಯಲ್ಲಾಪುರ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರಾದ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು. ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು.

ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್​ ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button