
ಬೆಂಗಳೂರು : ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಲು ಇದೇ ವಾರ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತಾಡಿದ ಅವರು, ಮೇಕೆದಾಟು ಯೋಜನೆ ಬಗ್ಗೆ ಇದೇ ವಾರ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.
ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ 1000 ಕೋಟಿ ರೂ.ಗಳನ್ನು ಮೀಸಲಿಟ್ಟರೂ ಕೇಂದ್ರದಿಂದ ಅಗತ್ಯ ಅನುಮತಿಗಳನ್ನು ನೀಡದಿದ್ದರೆ ಹೆಚ್ಚಿನ ಅರ್ಥವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದರು.
ಕಳೆದ ವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕರ್ನಾಟಕ ಮತ್ತು ತಮಿಳುನಾಡು ನಡುವಿನ ಮಾತುಕತೆಗೆ ಕೇಂದ್ರವು ಅನುಕೂಲ ಕಲ್ಪಿಸುತ್ತದೆ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
