Breaking NewsLatestಬೆಳಗಾವಿರಾಜಕೀಯರಾಜ್ಯ

ಪುಂಡಾಟಿಕೆ ತಡೆಗೆ ನಿರ್ಣಾಯಕ ಕ್ರಮ: ಸಿಎಂ

ಬೆಳಗಾವಿ: ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದರು.

ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದೂ ಸಿಎಂ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button