Breaking NewsLatestರಾಜ್ಯರಾಷ್ಟ್ರೀಯಸುದ್ದಿ

ಕಾಂಗ್ರೆಸ್ ಹಿನ್ನಡೆ ; ಇವಿಎಂ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ನವದೆಹಲಿ: ತೀವ್ರ ಕೂತುಹಲ ಮೂಡಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಹಾವು-ಏಣಿ ಆಟ ಶುರುವಾಗಿದೆ. ಈಗಾಗಲೇ ಕೆಲ ಕಡೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಬರುವುದಿಲ್ಲವೆಂದು ಖಚಿತವಾಗಿದೆ.

ಇತ್ತ ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪ ಮಾಡಿದ್ದಾರೆ. ಇನ್ನು ಚುನಾವಣೆಯ ಮತ ಎಣಿಕೆ ಮುಂದುವರಿಯುತ್ತಿದೆ. ಈ ನಡುವೆಯೇ ದೆಹಲಿಯಲ್ಲಿರೋ ಪಕ್ಷದ ಕಚೇರಿಯ ಎದುರು ಇವಿಎಂ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಉತ್ತರಾಖಂಡ್, ಮಣಿಪುರ, ಗೋವಾ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಂಜಾಬ್ ನಲ್ಲಿ ಎಎಪಿ ಪಕ್ಷ ಬಹುಮತ ಪಡೆಯುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button