Breaking NewsLatestಜಿಲ್ಲಾ ಸುದ್ದಿಮಂಡ್ಯರಾಜ್ಯಸುದ್ದಿ
ಆರಗ ಜ್ಞಾನೇಂದ್ರ ರಾಜೀನಾಮೆಗೆ ಡಿಕೆಶಿ ಪಟ್ಟು!

ಕೆ.ಆರ್.ಪೇಟೆ: ಧರ್ಮಗಳ ನಡುವೆ ಸಂಘರ್ಷ ಭಾವನೆ ಮೂಡಿಸಿ, ಅಶಾಂತಿ ಸೃಷ್ಟಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಅಪಘಾತದ ನಂತರದ ಜಗಳದ ವೇಳೆ ಚಂದ್ರು ಕೊಲೆಯಾಗಿದ್ದರೂ, ಉರ್ದು ಭಾಷೆ ಬರುವುದಿಲ್ಲವೆಂಬ ಕಾರಣಕ್ಕೆ ದಲಿತ ಯುವಕನ ಕೊಲೆಯಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಆದರೆ ಸಮಾಜಕ್ಕೆ ಸತ್ಯ ತಿಳಿಸಿರುವ ಪೊಲೀಸರು ಅಭಿನಂದನೆಗೆ ಅರ್ಹರು ಎಂದಿದ್ದಾರೆ.
