Breaking NewsLatestಕ್ರೈಂಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಬೀಗ ಹಾಕಿದ ಮನೆಗಳೇ ಈತನ ಟಾರ್ಗೇಟ್: ಕೊನೆಗೂ ಸಿಕ್ಕಿಬಿದ್ದ ಚಾಲಾಕಿ ಕಳ್ಳ

ಧಾರವಾಡ: ಬೀಗ ಹಾಕಿದ್ದ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಗಳಿಗೆ ಕನ್ನ ಹಾಕ್ತಿದ್ದ ಖದಿಮನನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. 

ಗವಿಸಿದ್ದಪ್ಪ ಗಣಕೇರಿ ಬಂಧಿತ ಆರೋಪಿ. ಚಾಲುಕ್ಯ ನಗರದ ವಿನಯ ಪಾಟೀಲ್ ಎಂಬುವವರ ಮನೆಯಲ್ಲಿ ಬೀಗ ಮುರಿದು ಕಳ್ಳತನವಾಗಿತ್ತು. ಈ ಕುರಿತು ಮನೆ ಮಾಲೀಕರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೊನೆಗೂ ಚಾಲಾಕಿ ಖದೀಮನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನಿಂದ 3 ಲಕ್ಷ 60 ಸಾವಿರ ಮೌಲ್ಯದ 120 ಗ್ರಾಂ ಆಭರಗಳನ್ನು ವಶ ಪಡಿಸಿಕೊಂಡಿದ್ದಾರೆ. ವಿಚಾರಣೆಯ ವೇಳೆ ಕಿಮ್ಸ್ ಆಸ್ಪತ್ರೆ ಎದುರು ಮನೆಯೊಂದರಲ್ಲೂ ಕಳ್ಳತನ ಮಾಡಿದ್ದಾಗಿ ಆರೋಪಿ ಬಾಯಿ ಬಿಟ್ಟಿದ್ದಾನೆ. ಘಟನೆ ಕುರಿತು ವಿದ್ಯಾಗಿರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button