Breaking NewsLatestಜಿಲ್ಲಾ ಸುದ್ದಿಬೆಂಗಳೂರು ಗ್ರಾಮಾಂತರ

ಕ್ಷಯ ರೋಗ ನಿಯಂತ್ರಣ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ದೇವನಹಳ್ಳಿ: ಕ್ಷಯರೋಗವನ್ನು ಸಂಪೂರ್ಣವಾಗಿ ತೊಲಗಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರೋಗ ಸಂಬಂಧ ಜಾಗೃತಿ ವಹಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಂತೆ ಹೊಸಕೋಟೆ ತಾಲೂಕಿನಾದ್ಯಂತ ಪ್ರತಿ ಹಳ್ಳಿಗಳಲ್ಲಿ ಎಲ್ ಇ ಡಿ ಪರದೆಯ ಮೇಲೆ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ ನಾಗೇಶ್ ತಿಳಿಸಿದ್ದಾರೆ.

ಹೊಸಕೋಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಯರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಎಲ್ ಇ ಡಿ ಪರದೆಯ ಮೂಲಕ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ನಾಗೇಶ್, ರಾಷ್ಟ್ರ ಮಟ್ಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ 2021-22 ನೇ ಸಾಲಿನಲ್ಲಿ ಕ್ಷಯ ರೋಗ ನಿಯಂತ್ರಣದಲ್ಲಿ ಮೂರನೆ ಸ್ಥಾನದಲ್ಲಿದ್ದು, ಕಂಚಿನ ಪದಕ ಪಡೆದಿದೆ ಎಂದಿದ್ದಾರೆ. ಕ್ಷಯ ರೋಗ ನಿಯಂತ್ರಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ವೈದ್ಯಕೀಯ ಸಿಬ್ಬಂದಿ ಶ್ರಮದಿಂದ ಈ ಗುರಿ ಸಾದಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ ವೀಣಾ, ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ ಸತೀಶ್, ವೈದ್ಯರಾದ ಡಾ ಫಾರೂಕ್, ಡಾ ರಾಘವೇಂದ್ರ, ಡಾ ಮಂಜುನಾಥ್, ಕ್ಷಯ ರೋಗ ವಿಭಾಗದ ಅಧಿಕಾರಿಗಳಾದ ಸಂದೀಪ್, ಚಂದ್ರಶೇಖರ್, ಮಂಜುನಾಥ್ ಮೊದಲಾದವರು ಹಾಜರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button