Breaking NewsLatestಮೆಟ್ರೋರಾಜ್ಯಸುದ್ದಿ

ಹಿಜಾಬ್​​ ವಿವಾದ : ವಿಸ್ತ್ರತ ಪೀಠಕ್ಕೆ ವಿಚಾರಣೆಗೆ ವರ್ಗಾಯಿಸಿದ ನ್ಯಾಯಮೂರ್ತಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕೋಮು ಸಂಘರ್ಷ ಸೃಷ್ಠಿಸಿದ್ದ ಹಿಜಾಬ್‌-ಕೇಸರಿ ಶಾಲು ಪ್ರಕರಣವನ್ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇಂದಿನ ವಾದ ವಿವಾದದ ಬಳಿಕ ವಿಸ್ತ್ರತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.

ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್​​ಗೆ ನ್ಯಾಯಮೂರ್ತಿಗಳ ನಿರ್ದೇಶನ ನೀಡಿದ್ದಾರೆ.

ಅರ್ಜಿದಾರರು ಮುಂದಿನ ವಿಚಾರಣೆ ವೇಳೆ ಮನವಿ ಸಲ್ಲಿಸಬಹುದು. ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಸೂಚನೆ ನೀಡಿದ್ದಾರೆ. 

Spread the love

Related Articles

Leave a Reply

Your email address will not be published. Required fields are marked *

Back to top button