Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಸುದ್ದಿ

ಹಿಜಾಬ್ ವಿವಾದ: ಸರ್ಕಾರದಿಂದ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಶಾಲೆ-ಕಾಲೇಜುಗಳಲ್ಲಿ ಸರ್ಕಾರ ಈಗಾಗಲೇ ವಸ್ತ್ರಸಂಹಿತೆ ಜಾರಿಗೊಳಿಸಿದೆ. ಧಾರ್ಮಿಕ ಸಂಕೇತದ ವಸ್ತ್ರಕ್ಕೆ ಅವಕಾಶ ಇಲ್ಲ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದೆ.

ಸರ್ಕಾರ ಯಾವುದೇ ಧರ್ಮ, ಸಮುದಾಯದ ಪರವಾಗಿಲ್ಲ. ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತದ ವಸ್ತ್ರಕ್ಕೆ ಅವಕಾಶ ಇಲ್ಲ. ಸಮವಸ್ತ್ರನೀತಿಯಿಂದ ಅರ್ಜಿದಾರರ ಹಕ್ಕಿಗೆ ಧಕ್ಕೆಯಾಗಿಲ್ಲ. ವಿದ್ಯಾರ್ಥಿಗಳು ಹಿಜಾಬ್ ಧಾರಣೆಯಿಂದ ಸಮವಸ್ತ್ರ ನೀತಿ ಉಲ್ಲಂಘನೆಯಾಗಿದೆ. ಕೆಲವರಿಗೆ ವಿನಾಯಿತಿ ನೀಡಿದರೆ ಉಳಿದವರು ಕೇಳುತ್ತಾರೆ ಎಂದೂ ಅದು ಹೇಳಿದೆ.

ಶಾಲೆ-ಕಾಲೇಜುಗಳು ಯಾವುದೇ ಧರ್ಮದ ಆಶ್ರಯ ಕೇಂದ್ರಗಳಲ್ಲ. ವಿದೇಶಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.  ಹಲವು ದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಯೂ ಹಿಜಾಬ್ ನಿಷೇಧಿಸಲಾಗಿದೆ. ಕೆಲವರಿಗೆ ವಿನಾಯಿತಿ ನೀಡಿದರೆ ಉಳಿದವರು ಕೇಳುತ್ತಾರೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button