Breaking NewsLatestರಾಷ್ಟ್ರೀಯವಿದೇಶಸುದ್ದಿ
ಮತ್ತೂಮ್ಮೆ ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ಸೂಚನೆ

ಕೀವ್: ಯುದ್ಧಪೀಡಿತ ಉಕ್ರೇನ್ನಿಂದ ಭಾರತೀಯ ನಾಗರಿಕರು ಮತ್ತು ವಿದ್ಯಾರ್ಥಿಗಳು ಕೂಡಲೇ ಸ್ವದೇಶಕ್ಕೆ ಮರಳುವಂತೆ ಭಾರತೀಯ ರಾಯಭಾರ ಕಚೇರಿ ಹೊಸದಾಗಿ ಸೂಚನೆ ಹೊರಡಿಸಿದೆ.
ಈ ಮೊದಲು ಕೂಡ ಅ.19ರಂದು ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ಅಲ್ಲಿನ ರಾಯಭಾರ ಕಚೇರಿ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಭಾರತೀಯರು ಉಕ್ರೇನ್ ತೊರೆದಿದ್ದಾರೆ. ಆದರೆ ಭಾರತೀಯ ವಿದ್ಯಾರ್ಥಿಗಳು ಮಾತ್ರ ತಾವು ಉಕ್ರೇನ್ನಲ್ಲೇ ಉಳಿಯುವುದಾಗಿ ಹೇಳಿದ್ದರು.
ರಷ್ಯಾದಿಂದ ಬಾಂಬ್ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಗೆ ಲಭ್ಯವಿರುವ ಸಾರಿಗೆಯನ್ನು ಬಳಿಸಿಕೊಂಡು ಕೂಡಲೇ ಉಕ್ರೇನ್ನಿಂದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಈಗಾಗಲೇ ಸೂಚಿಸಲಾಗಿದೆ.
