Breaking NewsLatestಕ್ರೈಂಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ

ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಕಾಳಾವರ ಬಳಿ ಅಸೋಡಿಯಲ್ಲಿ ನಡೆದಿದೆ.

ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಸಾಗಾಟದ ಲಾರಿ ಚಾಲಕ ಮಹಮ್ಮದ್ ಇಸಾಕ್ ಅವರಿಗೆ ಕೋಟೇಶ್ವರ ಹಾಲಾಡಿ ರಸ್ತೆಯ ಅಸೋಡು ನಂದಿಕೇಶ್ವರ ದೇಗುಲದ ಕಮಾನು ಬಳಿ ಹಿಂದಿನಿಂದ ಬಂದ ರಿಟ್ಸ್ ಕಾರಿನ ಚಾಲಕ, ಕಾರನ್ನು ಮುಂದಕ್ಕೆ ತಂದು ನಿಲ್ಲಿಸಿ ಹಲ್ಲೆಗೈದಿದ್ದಾನೆ.

ಕಾರು ಚಾಲಕ ಕಾರಿನಿಂದ ಇಳಿದು ಹೋಗಿ ಲಾರಿ ಚಾಲಕನಿಗೆ ಹೊಡೆಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾರು ಚಾಲಕನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರು ಚಾಲಕನ ವಿರುದ್ಧ ಇಸಾಕ್ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button