Breaking NewsLatestಕ್ರೈಂರಾಜ್ಯಸುದ್ದಿ
ಪ್ರೀತಿ ನಿರಾಕರಿಸಿದ್ದರಿಂದ ಮನನೊಂದು ಯುವಕ ನೇಣಿಗೆ ಶರಣು!

ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಮೃತ ಯುವಕ. ಮದುವೆ ಆಗುವಂತೆ ಅರುಣ್ ಯುವತಿಯೊಬ್ಬಳ ಬೆನ್ನು ಬಿದ್ದಿದ್ದ. ಆದ್ರೆ ಯುವತಿ ಮದುವೆಯಾಗಲು ನಿರಾಕರಿಸಿದ್ದಳು. ಇದರಿಂದ ಮನನೊಂದ ಯುವಕ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.
