Breaking NewsLatestಕ್ರೈಂಸುದ್ದಿ

ಮಂಜು ವಾರಿಯರ್ ಗೆ ಬೆದರಿಕೆ ಹಾಕಿದ ಆರೋಪ: ಯುವ ನಿರ್ದೇಶಕನನ್ನು ಬಂಧಿಸಿದ ಪೊಲೀಸರು

ಮಂಜು ವಾರಿಯರ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಯುವಕನ ವಿರುದ್ಧ ಕೊಚ್ಚಿ ಎಳಮಕ್ಕರ್​ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದೂರು ದಾಖಲಾದ ನಂತರ ಪೊಲೀಸರು ಮಂಜು ವಾರಿಯರ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣಗಳ ಮೂಲಕ ಮಾನನಷ್ಟ ಮತ್ತು ಬೆದರಿಕೆ ಹಾಕಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಆ ಯುವಕ ಹಲವು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಜು ವಾರಿಯರ್ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿಯು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಯುವ ನಿರ್ದೇಶಕನಾಗಿರುವ ಸೂಚನೆಯಿದೆ. ನಟಿಯ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ

Spread the love

Related Articles

Leave a Reply

Your email address will not be published. Required fields are marked *

Back to top button