Breaking NewsLatestಕ್ರೈಂಸುದ್ದಿ

ಮಂಜು ವಾರಿಯರ್ ಗೆ ಬೆದರಿಕೆ ಹಾಕಿದ ಆರೋಪ: ಯುವ ನಿರ್ದೇಶಕನನ್ನು ಬಂಧಿಸಿದ ಪೊಲೀಸರು

ಮಂಜು ವಾರಿಯರ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಯುವಕನ ವಿರುದ್ಧ ಕೊಚ್ಚಿ ಎಳಮಕ್ಕರ್​ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದೂರು ದಾಖಲಾದ ನಂತರ ಪೊಲೀಸರು ಮಂಜು ವಾರಿಯರ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣಗಳ ಮೂಲಕ ಮಾನನಷ್ಟ ಮತ್ತು ಬೆದರಿಕೆ ಹಾಕಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಆ ಯುವಕ ಹಲವು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಜು ವಾರಿಯರ್ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿಯು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಯುವ ನಿರ್ದೇಶಕನಾಗಿರುವ ಸೂಚನೆಯಿದೆ. ನಟಿಯ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button