ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಮೈಸೂರು ವಿದ್ಯಾರ್ಥಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 1 ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ 2022ರ ಕಾರ್ಯಕ್ರಮದಲ್ಲಿ ಮೈಸೂರು ವಿದ್ಯಾರ್ಥಿ ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿಗೆ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ವಿದ್ಯಾರ್ಥಿ ಎಂಬ ಹೆಗ್ಗಳಿಕೆ ಈ ವಿದ್ಯಾರ್ಥಿಯದ್ದಾಗಿದೆ.
‘ಪರೀಕ್ಷಾ ಪೇ ಚರ್ಚಾ’ ಐದನೇ ಆವೃತ್ತಿಯ ಸಂವಾದದಲ್ಲಿ ಮೋದಿ ವಿದ್ಯಾರ್ಥಿಗಳು ಮುಂಬರುವ ಬೋರ್ಡ್ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಯನ್ನ ತೆಗೆದುಕೊಳ್ಳುವ ಹಾದಿಯಲ್ಲಿರುವ ಮಕ್ಕಳ ಆತಂಕವನ್ನು ದೂರ ಮಾಡುವ ಕುರಿತಾಗಿ ಮಾತನಾಡಲಿದ್ದಾರೆ. ಪರೀಕ್ಷಾ ಪೇ ಚರ್ಚಾ 2022 ರ ಐದನೇ ಆವೃತ್ತಿಯು ನವದೆಹಲಿಯ ತಾಲ್ಕೋಟ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅನೇಕ ರಾಜ್ಯದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿ ಕಾರ್ಯಕ್ರಮಕ್ಕೆ ಎಂ.ಬಿ. ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ತರುಣ್ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ವಿದ್ಯಾರ್ಥಿಯಾಗಿದ್ದಾರೆ. ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲಿದ್ದು ವರ್ಚುವಲ್ ಮೂಲಕವೇ ‘ತರಗತಿಯಲ್ಲಿ ಡಿಜಿಟಲ್ ಸಂವಾದ’ ಎಂಬ ವಿಷಯದ ಕುರಿತು ಮೋದಿ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ.
