ಪ್ರಿನ್ಸಿಪಾಲ್ ಮೇಲೆ ಆಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ!

ಕಲಬುರಗಿ: ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆಸಿಡ್ ಹಾಕಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.
ಪ್ರತಿಷ್ಠಿತ ಹೆಚ್ಕೆಇ ಸೊಸೈಟಿಯ ಫಾರ್ಮರ್ಸಿ ಕಾಲೇಜ್ ನ ಪ್ರಿನ್ಸಿಪಾಲ್ ಡಾ.ಅರುಣ್ ಕುಮಾರ್ ಬೆನಕಳ ಮೇಲೆ ಆಸಿಡ್ ಎರಚಿ ಹಲ್ಲೆಗೆ ಯತ್ನ ಮಾಡಲಾಗಿದೆ. ಮಾರ್ಚ್ 21 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇದೆ ಫಾರ್ಮರ್ಸಿ ಕಾಲೇಜ್ನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಶಾಂತವೀರ ಸಲಗಾರ ಎಂಬಾತ ಆಸಿಡ್ ಎರಚಲು ಪ್ರಯತ್ನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಶಾಂತವೀರ ಪರೀವಿಕ್ಷಣಾ ಇನ್ಸಪೇಕ್ಟರ್ ಆಗಿ ನೇಮಕವಾಗಬೇಕಾಗಿತ್ತು. ಆದ್ರೆ ಪ್ರಿನ್ಸಿಪಾಲ್ ಅರುಣ್ಕುಮಾರ್ ತಮ್ಮ ಕೈವಾಡದಿಂದ ಹುದ್ದೆ ತಪ್ಪಿಸಿದ್ದಾರೆ ಎಂದು ಶಾಂತವೀರ ಎಸಿಡ್ ದಾಳಿ ನಡೆಸಲು ಮುಂದಾಗಿದ್ದರಂತೆ. ಎಚ್ಕೆಇ ಫಾರ್ಮರ್ಸಿ ಕಾಲೇಜ್ ಆವರಣದಲ್ಲಿಯೇ ಆಸಿಡ್ ಎರಚಲು ಮುಂದಾಗಿದ್ದ ಶಾಂತವೀರ, ಅವಾಚ್ಯ ಶಬ್ದಗಳಿಂದ ಪ್ರಿನ್ಸಿಪಾಲ್ ರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ ತನ್ನ ಕಾರಿನಿಂದ ಡಿಕ್ಕಿ ಹೊಡೆದು ಅಫಘಾತಕ್ಕೆ ಯತ್ನಿಸಿದ್ದಾನೆ ಅಂತ ಆರೋಪಿಸಲಾಗಿದೆ. ಈ ವೇಳೆ ಕೇಲ ಪ್ರಾಧ್ಯಪಕರು ಪ್ರಿನ್ಸಿಪಾಲ್ರನ್ನು ರಕ್ಷಣೆ ಮಾಡಿ ಮನೆಗೆ ಸೇಫ್ ಆಗಿ ತಲುಪಿಸಿದ್ದಾರೆ.
ಈ ಕುರಿತು ಬ್ರಹ್ಮಪೂರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಪ್ರಾಧ್ಯಾಪಕ ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
