
Russia-Ukraine crisis: ನವದೆಹಲಿ: ಆಪರೇಷನ್ ಗಂಗಾ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ನೆರೆ ರಾಷ್ಟ್ರಗಳ ಮೂಲಕ ಸ್ವದೇಶಕ್ಕೆ ಸ್ಥಳಾಂತರಿಸುವ ಪ್ರಯತ್ನಗಳನ್ನು ಹೆಚ್ಚಿಸುವ ಸಲುವಾಗಿ ಭಾರತೀಯ ವಾಯುಪಡೆಯನ್ನು ನಿಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.
ಸ್ಥಳಾಂತರ ಪ್ರಯತ್ನಗಳಿಗೆ ನಮ್ಮ ವಾಯುಪಡೆ ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು ಎಂಬುದು ಇದರ ಹಿಂದಿನ ಉದ್ದೇಶ ಎನ್ನಲಾಗಿದೆ.
ಇದು ಮಾನವೀಯ ನೆರವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿಸಲು ಸಹಾಯ ಮಾಡುತ್ತದೆ. ಮಂಗಳವಾರದಿಂದ ಆಪರೇಷನ್ ಗಂಗಾ ಭಾಗವಾಗಿ ಭಾರತೀಯ ವಾಯುಪಡೆ ಸಿ-17 ವಿಮಾನಗಳನ್ನು ನಿಯೋಜಿಸುವ ಸಾಧ್ಯತೆ ಇದೆ.
