Breaking NewsLatestಜಿಲ್ಲಾ ಸುದ್ದಿರಾಜ್ಯಶಿವಮೊಗ್ಗಸುದ್ದಿ

ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ

ಶಿವಮೊಗ್ಗ: ನೀವು ಕೋಲಾರಕ್ಕೆ ಹೋಗಬೇಡಿ. ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಕೆ.ಎಸ್ ಈಶ್ವರಪ್ಪ ಸಲಹೆ ನೀಡಿದರು.

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲಿ ನಿಲ್ತಾರೋ, ಬಿಡ್ತಾರೋ ನಮಗೇನೂ ಸಂಬಂಧವಿಲ್ಲ. ಒಬ್ಬ ಜನಪ್ರತಿನಿಧಿ ಯಾವ ಕ್ಷೇತ್ರದಲ್ಲಿ ಗೆದ್ದಿರ್ತಾನೋ ಅದೇ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನಿಂತರೆ ಆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ ಎಂದರ್ಥ. ಅದು ಬಿಟ್ಟು ಈ ಸಾರಿ ಒಂದು ಕ್ಷೇತ್ರ, ಮುಂದಿನ ಸಾರಿ ಇನ್ನೊಂದು ಕ್ಷೇತ್ರ, ಅದಕ್ಕೂ ಮುಂದಿನ ವರ್ಷ ಇನ್ನೊಂದು ಕ್ಷೇತ್ರ ಹೀಗೆ ಮಾಡಿದರೆ ಯಾವ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿಲ್ಲ, ಆ ಜನರ ಪ್ರೀತಿ ವಿಶ್ವಾಸ ಗಳಿಸಿಲ್ಲ ಎಂಬ ಅಭಿಪ್ರಾಯ ಬರುತ್ತೆ ಎಂದರು.

ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾವುದೋ ಕಾರಣಕ್ಕೆ ಸೋತಿರಿ, ಯಾರ್ಯಾರಿಗೋ ಬೈದಿರಿ, ಕಾರ್ಯಕರ್ತರಿಗೆ ಕೆಲಸ ಮಾಡಿಲ್ಲ ಎಂದು ಬೈದಿರಿ, ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ತೋರಿಸಿ. ಅದು ಬಿಟ್ಟು ನನಗೆ ಅಲ್ಲಿ ಕರೀತಾರೆ, ಕೋಲಾರಕ್ಕೆ ಕರೀತಾರೆ ಅಂತ ಹೇಳಿದ್ರೆ

Spread the love

Related Articles

Leave a Reply

Your email address will not be published. Required fields are marked *

Back to top button