Breaking NewsLatestರಾಷ್ಟ್ರೀಯ
ನ್ಯಾಯಾಂಗದ ಅಧಿಕಾರಿಗಳ ಮೇಲೆ ದೇಶಾದ್ಯಂತ ಹಲ್ಲೆ; ಆತಂಕ ವ್ಯಕ್ತಪಡಿಸಿದ ಸುಪ್ರಿಂ ಕೋರ್ಟ್

ನವದೆಹಲಿ: ನ್ಯಾಯಾಂಗದ ಅಧಿಕಾರಿಗಳ ಮೇಲೆ ದೇಶಾದ್ಯಂತ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆತಂಕ ವ್ಯಕ್ತಪಡಿಸಿದೆ.
ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದ ಜಡ್ಜ್ ಕೊಲೆ ಸಂಬಂಧ ವಾರದೊಳಗೆ ವರದಿ ಸಲ್ಲಿಸುವಂತೆ ಜಾರ್ಖಂಡ್ನ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನ್ಯಾಯಾಧೀಶರ ಕೊಲೆ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಸುಪ್ರಿಂ ಕೋರ್ಟ್, ನ್ಯಾಯಾಂಗದ ಅಧಿಕಾರಿಗಳ ಮೇಲೆ ಹಲ್ಲೆ ನಡೆದಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಂದ ಇಂಥದೇ ವರದಿ ನಿರೀಕ್ಷಿಸುವುದಾಗಿ ಸೂಚಿಸಿತು.
ಧನ್ಬಾದ್ ಪ್ರಕರಣದ ಪರಿಣಾಮ ವಿಪರೀತ ಮಟ್ಟದ್ದು. ನ್ಯಾಯಾಂಗದ ಅಧಿಕಾರಿಗಳ ಮೇಲೆ ದೇಶಾದ್ಯಂತ ಹಲ್ಲೆ ನಡೆಯುರುವ ಬಗ್ಗೆ ವರದಿಗಳು ಬರುತ್ತಿವೆ. ನಾವು ಇದನ್ನು ಪರಿಶೀಲಿಸಲು ಉದ್ದೇಶಿಸಿದ್ದೇವೆ ಮತ್ತು ಎಲ್ಲಾ ರಾಜ್ಯಗಳಿಂದ ಈ ಸಂಬಂಧ ವರದಿ ಕೇಳುತ್ತೇವೆ ಎಂದು ಸಿಜೆಐ ಎನ್ ವಿ ರಮಣ ಹೇಳಿದರು.
