Breaking NewsLatestಕೊಡಗುಜಿಲ್ಲಾ ಸುದ್ದಿ

ಕಂದಕಕ್ಕೆ ಬಿದ್ದು ಹುಲಿ ಸಾವು: ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ!

ಕೊಡಗು: ಆನೆ ಕಂದಕದಲ್ಲಿ ಬಿದ್ದು ಹುಲಿ ಸಾವನ್ನಪ್ಪಿರುವ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಆನೆಚೌಕೂರು ವನ್ಯಜೀವಿ ವಲಯದ ಚೇಣಿಹಡ್ಲುವಿನಲ್ಲಿ ಪತ್ತೆಯಾಗಿದೆ. ಮತ್ತಿಗೋಡು ಶಾಖೆಯ ಮರಪಾಲ ಗಸ್ತಿನಲ್ಲಿ ಅರಣ್ಯ ರಕ್ಷಕರು ಮತ್ತು ಸಿಬ್ಬಂದಿಗಳು ಗಸ್ತು ಮಾಡುವಾಗ ಚೇಣಿಹಡ್ಲು ಹಾಡಿಯ ಹಿಂಭಾಗದ ಆನೆ ತಡೆ ಕಂದಕದ ಒಳಗೆ ಹುಲಿಯು ಸಾವನ್ನಪ್ಪಿರುವುದು ಗೋಚರಿಸಿದೆ.

ಸ್ಥಳಕ್ಕೆ ಹುಣಸೂರಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಆನೆಚೌಕೂರು ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹುಲಿ ಸಂರಕ್ಷಣೆಗೆ ನಿದೇರ್ಶನಗೊಂಡ ಮುಖ್ಯ ವನ್ಯಜೀವಿ ಪರಿಪಾಲಕ ಬೋಸ್ ಮಾದಪ್ಪ, ಸದಸ್ಯರಾದ ಶರೀನ್ ಸುಬ್ಬಯ್ಯ ಅವರ ಸಮ್ಮುಖದಲ್ಲಿ ಇಲಾಖಾ ಪಶುವೈದ್ಯಾಧಿಕಾರಿ ರಮೇಶ್ ಹಾಗೂ ಬಾಳೆಲೆ ಪಶುವೈದ್ಯಾಧಿಕಾರಿಗಳಾದ ಡಾ. ಭವಿಷ್ಯ ಕುಮಾರ್ ಅವರುಗಳು ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. ಹೆಚ್ಚಿನ ಪರೀಕ್ಷೆಗಾಗಿ ಹುಲಿಯ ಮೃತ ದೇಹದ ಮಾದರಿಗಳನ್ನು ಸಂಗ್ರಹಿಸಿ ಸ್ಥಳದಲ್ಲಿಯೇ ಹುಲಿಯ ಮೃತದೇಹವನ್ನು ಪಂಚಾಯಿತಿದಾರರ ಸಮಕ್ಷಮದಲ್ಲಿ ಸುಡಲಾಯಿತು.

Spread the love

Related Articles

Leave a Reply

Your email address will not be published. Required fields are marked *

Back to top button