Breaking NewsLatestರಾಷ್ಟ್ರೀಯಸುದ್ದಿ

ಕಾಂಗ್ರೆಸ್‌ಗೆ ಮರಳುವ ಸುಳಿವು ನೀಡಿದರೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿಯ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಜ್ಯೋತಿರಾದಿತ್ಯ ಸಿಂಧ್ಯಾ ಕೋರಿದ ಸ್ವಾಗತದ ವೈಖರಿಯು ಅವರು ಮತ್ತೊಮ್ಮೆ ಕಾಂಗ್ರೆಸ್ ಕಡೆಗೆ ಮರಳುತ್ತಿರುವುದರ ಸೂಚನೆ ಆಗಿರಬಹುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರರು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಬುಧವಾರ ಬೆಳಿಗ್ಗೆ ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋಡಾರ್ಲಿ ಗ್ರಾಮಕ್ಕೆ ಪ್ರವೇಶಿಸಿತು. ನವೆಂಬರ್ 23ರಂದು ನಡೆದ ಮೆರವಣಿಗೆಯನ್ನು ಉಲ್ಲೇಖಿಸಿ “ಮಧ್ಯಪ್ರದೇಶದಲ್ಲಿ ಎಲ್ಲರಿಗೂ ಸ್ವಾಗತವಿದೆ” ಎಂದು ಬಿಜೆಪಿ ನಾಯಕ ಜ್ಯೋತಿರಾಡಿತ್ಯ ಸಿಂಧ್ಯಾ ಹೇಳಿದ್ದರು. ಕಾಂಗ್ರೆಸ್ಸಿನ ಮಾಜಿ ಸದಸ್ಯರಾಗಿದ್ದ ಜ್ಯೋತಿರಾದಿತ್ಯ ಸಿಂಧ್ಯಾ 2020ರ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು.

ಇದೀಗ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಬಗ್ಗೆ ಉತ್ತಮ ರೀತಿಯಲ್ಲಿ ಸ್ವಾಗತ ಕೋರಿದ ಜ್ಯೋತಿರಾದಿತ್ಯ ಸಿಂಧ್ಯಾ ವೈಖರಿಯು ‘ಘರ್ ವಾಪ್ಸಿ’ ಯ ಸೂಚನೆಯಾಗಿರಬಹುದು” ಎಂದು ಹಿಮಾಚಲ ಪ್ರದೇಶದ ಮಾಜಿ ಪ್ರದೇಶ ಕಾಂಗ್ರೆಸ್ ಸಮಿತಿ (ಎಚ್‌ಪಿಸಿಸಿ) ಅಧ್ಯಕ್ಷರು ಹಾಗೂ ಕಾಂಗ್ರೆಸ್ ವಕ್ತಾರ ಆಗಿರುವ ಕುಲ್ದೀಪ್ ಸಿಂಗ್ ರಾಥೋರ್ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ:

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜನರು ಬದಲಾವಣೆಯ ಕಡೆಗೆ ಚಿತ್ತ ಹರಿಸಿದ್ದಾರೆ. ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಜನರು ಅಸಮಾಧಾನವನ್ನು ಹೊಂದಿದ್ದು, ಬದಲಾವಣೆಯ ಸ್ಪಷ್ಟ ಸೂಚನೆಯನ್ನು ಕೊಟ್ಟಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸ್ಪಷ್ಟ ಬಹುಮತದೊಂದಿಗೆ ರಚಿಸುತ್ತದೆ ಎಂದು ಕುಲ್ದೀಪ್ ಸಿಂಗ್ ರಾಥೋರ್ ಹೇಳಿದರು.

ಕಳೆದ ವರ್ಷ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಒಂದು ಲೋಕಸಭಾ ಉಪಚುನಾವಣೆಯನ್ನು ಕಳೆದುಕೊಂಡಾಗ ಬಿಜೆಪಿಯ ಸೋಲಿನ ಸುಳಿವನ್ನು ಕಂಡುಕೊಂಡಿದೆ. ಕಾಂಗ್ರೆಸ್ ಮತದಾನದಲ್ಲಿ ಪ್ರಾಬಲ್ಯ ಸಾಧಿಸಿದ ಪ್ರಮುಖ ವಿಷಯಗಳಾಗಿ ಬೆಲೆ ಏರಿಕೆ, ಹಣದುಬ್ಬರ ಮತ್ತು ಆಡಳಿತದ ಏರಿಳಿತವನ್ನು ಎತ್ತಿ ತೋರಿಸಿದೆ ಎಂದು ರಾಥೋರ್ ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button