ಜಿಲ್ಲಾ ಸುದ್ದಿ
ಕೋವಿಡ್ ರೋಗಿಗಳಿಗೆ ಉಚಿತ ಆಂಬ್ಯುಲೆನ್ಸ್ ಸೇವೆ

ಬಾಗಲಕೋಟೆ: ಕಾಂಗ್ರೆಸ್ ನಗರಸಭೆ ಸದಸ್ಯ ಲಕ್ಷ್ಮಣ್ ಮುಚಖಂಡಿ ಕೊಡಮಾಡಿದ ಕೋವಿಡ್ ರೋಗಿಗಳಿಗೆ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್, ಮಾಜಿ ಸಚಿವ ಎಚ್ ವೈ ಮೇಟಿ ಉದ್ಘಾಟಿಸಿದರು..
ಬಾಗಲಕೋಟೆ ನಗರದ ಕಾಂಗ್ರೆಸ್ ಕಚೇರಿಯ ಬಳಿ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್ ಜಿ ನಂಜಯ್ಯನಮಠ, ಮುಖಂಡ ಗೋವಿಂದ ಬಳ್ಳಾರಿ, ನಗರಸಭೆ ಸದಸ್ಯರು,ಸೇರಿದಂತೆ ಮಹಿಳಾ ಕಾರ್ಯಕರ್ತರು ಇದ್ದರು.




