ಕಾರವಾರ: ಸಿಐಎಸ್ಎಫ್ ಯೋಧರ ಸೈಕಲ್ ಯಾತ್ರೆ

ಕಾರವಾರ : “ಏಕ ಭಾರತ ಶ್ರೇಷ್ಠ ಭಾರತ”ಧ್ಯೇಯವಾಕ್ಯದೊಂದಿಗೆ ಸೈಕಲ್ ಯಾತ್ರೆ ಕೈಗೊಂಡಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ತಂಡವನ್ನು ಕಾರವಾರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸ್ವಾಗತಿಸಲಾಯಿತು.
ಭಾರತ ಸ್ವಾತಂತ್ರ್ಯಗೊಂಡು 75 ವರ್ಷ ಪೂರ್ಣಗೊಂಡ ಸವಿನೆನಪಿಗಾಗಿ ಆಚರಿಸಲಾಗುತ್ತಿರುವ”ಆಜಾದಿ ಕಾ ಅಮೃತ್ ಮಹೋತ್ಸವ”ದ ಅಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಲು ಮತ್ತು ದೈಹಿಕ ಸಾಮರ್ಥ್ಯದ ಅಗತ್ಯವನ್ನು ಉತ್ತೇಜಿಸುವ ಗುರಿಯೊಂದಿಗೆ ತಿರುವನಂತಪುರಂನಿಂದ ಗುಜರಾತ್ನ ಕೆವಾಡಿಯಾದವರೆಗೆ ಸುಮಾರು 2,100 ಕಿ.ಮೀ.ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಮಾರ್ಗವಾಗಿ ಕಾರವಾರ ನಗರಕ್ಕೆ ಆಗಮಿಸಿದ ತಂಡವನ್ನು ಜಿಲ್ಲಾ ಪೊಲೀಸ್ ಇಲಾಖೆಯಿಂದ ಬರಮಾಡಿಕೊಳ್ಳಲಾಯಿತು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹಾಗೂ ಕ್ರೀಡಾಪಟು ನಿವೇದಿತಾ ಸಾವಂತ್ ಅವರು ರ್ಯಾಲಿಗೆ ಹಸಿರು ನಿಶಾನೆ ತೋರಿ ಮುಂದಿನ ಪ್ರಯಾಣಕ್ಕೆ ಚಾಲನೆ ನೀಡಿದರು.
ಸಿಐಎಸ್ಎಫ್ ಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗೋವಾಕ್ಕೆ ತೆರಳಿದ್ದು,ಅಲ್ಲಿಂದ ಗುಜರಾತ್ನತ್ತ ಸಾಗಲಿದೆ.ದಕ್ಷಿಣ ವಲಯದ ಸಿಐಎಸ್ಎಫ್ ಅಧಿಕಾರಿಗಳು ಸೇರಿದಂತೆ 15 ಸಿಬ್ಬಂದಿ ಈ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಂಡ ಪ್ರತಿದಿನ 120 ಕಿ.ಮೀ.ನಷ್ಟು ದೂರ ಪ್ರಯಾಣಿಸುತ್ತಿದೆ.ಈ ರ್ಯಾಲಿಯು ಅ. 26 ರಂದು ಗುಜರಾತ್ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭ್ಭಾಯಿ ಪಟೇಲರ ಏಕತಾ ಪ್ರತಿಮೆಯ ಬಳಿ ಸಮಾರೋಪಗೊಳ್ಳಲಿದೆಯಾಗಿ ತಂಡದ ಮುಖ್ಯಸ್ಥರು ತಿಳಿಸಿದ್ದಾರೆ




