ರೈಲು ಸಂಚಾರದಲ್ಲಿ ಬಾರಿ ವಿಳಂಬ: ಸ್ಪರ್ಧಾತ್ಮಕ ಪರೀಕ್ಷೆಗಾಗಿ ಟ್ರಾಫಿಕ್ ರಹಿತ ಸಂಚಾರ ವ್ಯವಸ್ಥೆ

ಕಲಬುರ್ಗಿ : ರೈಲು ಸಂಚಾರದಲ್ಲಿ ಬಾರಿ ವಿಳಂಭವಾದ ಹಿನ್ನಲೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಆಗಮಿಸಿದ ಅಭ್ಯರ್ಥಿಗಳಿಗೆ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆಯನ್ನು ಕಲಬುರ್ಗಿ ಪೊಲೀಸರು ಮಾಡಿದ್ದರು.
ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಲು ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿದ ಜಿಲ್ಲೆಗಳಿಂದ ಸುಮಾರು 2400 ಅಭ್ಯರ್ಥಿಗಳು ಕಲಬುರ್ಗಿ ರೈಲು ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಆಯಾ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ವ್ಯವಸ್ಥೆಗಾಗಿ 18 ಸಿಟಿ ಬಸ್, 100 ಅಟೋಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಅಟೋ ಚಾಲಕರ ಸಂಘದವರು ವಿದ್ಯಾರ್ಥಿಗಳನ್ನು ಊಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯ ಮಾಡಿದರು.
ಆತಂಕದಲ್ಲಿದ್ದ ವಿದ್ಯಾರ್ಥಿಗಳು ರೈಲು ನಿಲ್ಲುತ್ತಿದ್ದಂತೆ ಓಡೋಡಿ ಅಟೋ ಹಾಗೂ ಬಸ್ ಗಳತ್ತ ಆಗಮಿಸಿದರು. ಸಾರ್ವಜನಿಕರು, ಪೊಲೀಸರು, ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ವಯ ಬಸ್ ಹಾಗೂ ಅಟೋದಲ್ಲಿ ಹೋಗಲು ಸಹಾಯ ಮಾಡಿದರು.

ಹಾಸನ-ಸೋಲಾಪುರ ಸೂಪರ್ ಫಾಸ್ಟ್, ಉದ್ಯಾನ್ ರೈಲು ಬೆಳಗ್ಗೆ 6 ಗಂಟೆಗೆ ಕಲಬುರ್ಗಿ ನಗರಕ್ಕೆ ಬರಬೇಕಿತ್ತು. ಬೆಳಗ್ಗೆ ಬಂದು 11 ಗಂಟೆಗೆ ಪರೀಕ್ಷೆ ಹಾಜರಾಯ್ತು ಎನ್ನುವ ಲೆಕ್ಕಾಚಾರದಲ್ಲಿ ವಿದ್ಯಾರ್ಥಿಗಳು ರೈಲು ಮೂಲಕ ಆಗಮಿಸಿದ್ದರು. ಆದ್ರೆ ತಾಂತ್ರಿಕ ತೊಂದರೆಯಿಂದ ರೈಲುಗಳು ಬೆಳಗ್ಗೆ 6 ಗಂಟೆ ಬದಲಾಗಿ ಮಧ್ಯಾಹ್ನ 1-30ಕ್ಕೆ ಕಲಬುರ್ಗಿ ತಲುಪಿವೆ. ಹೀಗಾಗಿ PWD AE ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳು ಪರದಾಡಿದರು.
ಬೆಳಗ್ಗೆ 11 ಗಂಟೆಯ ಪತ್ರಿಕೆ ಹಾಜರಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗಿಲ್ಲದ ಕಾರಣ ಮಧ್ಯಾಹ್ನ 2 ಗಂಟೆಗೆ ಎರಡನೇ ಪರೀಕ್ಷೆ ಹಾಜರಾಗಲು ಅಭ್ಯರ್ಥಿಗಳಿಗೆ ಕಲಬುರ್ಗಿ ಪೊಲೀಸರು ವ್ಯವಸ್ಥೆ ಮಾಡಿಕೊಟ್ಟರು.




