ಉತ್ತರ ಕನ್ನಡಜಿಲ್ಲಾ ಸುದ್ದಿ

ಉತ್ತರ ಕನ್ನಡ : ಭತ್ತ ಮತ್ತು ಕಬ್ಬಿನ ಗದ್ದೆಗೆ ಕಾಡಾನೆ ಹಿಂಡು ದಾಳಿ

ಕಾರವಾರ : ಕಾಡಾನೆಗಳ ಹಿಂಡು ಭತ್ತ ಹಾಗೂ ಗೋವಿನ ಜೋಳದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು, ತುಳಿದು ನಾಶ ಪಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬ್ಯಾನಳ್ಳಿ ಅರಣ್ಯದ ಅಂಚಿನ ಗದ್ದೆಗಳಲ್ಲಿ ನಡೆದಿದೆ.

ಬ್ಯಾನಳ್ಳಿ ಗ್ರಾಮದ ಸೋನು ವರಕ್ ಎಂಬವರ ಗದ್ದೆಯಲ್ಲಿ 3 ಎಕರೆಯಲ್ಲಿ ಬೆಳೆದ ಭತ್ತ ಮತ್ತು ಕಟಾವು ಮಾಡಿದ ಗೋವಿನ ಜೋಳದ ತೆನೆಯನ್ನು ಕಾಡಾನೆಗಳು ಹಾನಿ ಮಾಡಿವೆ.ಅಲ್ಲದೇ ಅಕ್ಕಪಕ್ಕದ ಭತ್ತದ ಗದ್ದೆಗಳಿಗೂ ದಾಳಿ ನಡೆಸಿ ಹಾನಿ ಮಾಡಿದ ಬಗ್ಗೆ ರೈತರು ತಿಳಿಸಿದ್ದಾರೆ. ಕಾಡಾನೆಗಳ ಹಿಂಡು ಮುಂಡಗೋಡ ತಾಲೂಕಿನ ಕಾತೂರು ವಲಯದ ಮರಗಡಿ, ಕಾತೂರ, ಸಿಂಗನಳ್ಳಿ, ಆಲಳ್ಳಿ ಗ್ರಾಮಗಳ ಭಾಗದ ರೈತರ ತೋಟ, ಗದ್ದೆಗಳಲ್ಲಿ ಬೆಳೆದ ಬೆಳೆಗಳನ್ನು ತಿಂದು ತುಳಿದು ಹಾನಿ ಮಾಡಿದ್ದವು.

ಆದರೆ ಈಗ ಮುಂಡಗೋಡ ವಲಯದ ಬ್ಯಾನಳ್ಳಿಯಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡುತ್ತಿವೆ. ಈಗಾಗಲೇ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ನಾಶವಾಗಿದೆ. ಮತ್ತೊಂದೆಡೆ ಕಾಡು ಪ್ರಾಣಿಗಳ ದಾಳಿಯಿಂದ ರೈತ ಬೆಳೆದ ಬೆಳೆ ಹಾನಿಯಾಗುತ್ತಿರುವುದರಿಂದ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button