ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಜವಳಿ ಮತ್ತು ಕೈಮಗ್ಗ ಇಲಾಖೆಯಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ಧಾರವಾಡ: ಕೊರೊನಾ ಸಮಯದಲ್ಲಿ ಸಂಕಷ್ಟಕ್ಕಿಡಾಗಿದ್ದ ನೇಕಾರರ ಆರ್ಥಿಕ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸುಮಾರು 112 ಕೋಟಿ ರೂಪಾಯಿಯಷ್ಟು ನೇಕಾರರ ಸಾಲ ಮನ್ನಾ ಮಾಡಿದೆ. ಅದರ ಜೊತೆಗೆ ಕೈಮಗ್ಗ ನೇಕಾರರ ಪುನಶ್ವೇತನವಾಗಬೇಕು ಎಂಬ ಉದ್ದೇಶದಿಂದ ನಮ್ಮ ಇಲಾಖೆಯಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದ ಸಂದರ್ಭದಲ್ಲಿ ನೇಕಾರರ ಪುನಶ್ವೇತನಕ್ಕಾಗಿ ಬೃಹತ್ ಮೊತ್ತದ ಪರಿಹಾರವನ್ನು ನೀಡಿಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಹಳಷ್ಟು ಜನ ನೇಕಾರರು ಇದ್ದಾರೆ. ಹಾಗಾಗಿ ನಾಳೆ ಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ, ಉತ್ತರ ಕರ್ನಾಟಕ ಭಾಗದ ಎಲ್ಲ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆದಿದ್ದೇನೆ. ಸಭೆಯಲ್ಲಿ ನೇಕಾರರ ಸಮಸ್ಯೆ ಮತ್ತು ಇಲಾಖೆಯ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೆಐಡಿಬಿ 250 ಎಕರೆ ಜಮೀನು ಹಂಚಿಕೆಯ ಕುರಿತು ಪರಿಶೀಲನೆ

ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಕೆಐಡಿಬಿ ವ್ಯಾಪ್ತಿಯಲ್ಲಿ 250 ಎಕರೆ ಜಮೀನು ಹಂಚಿಕೆಯ ಕುರಿತು ಪರಿಶೀಲನೆ ನಡೆಸಲಾಗುವುದು. ಸರ್ಕಾರದ ನಿಯಮ ಗಾಳಿಗೆ ತೂರಿ ಏನಾದರೂ ಅಧಿಕಾರಿಗಳು ತಪ್ಪು ಮಾಡಿದಲ್ಲಿ ಕ್ರಮ ಜರುಗಿಸಲಾಗುವುದು. ಇಲ್ಲಿ ಯಾರನ್ನು ರಕ್ಷಣೆ ಮಾಡುವ ಅವಶ್ಯಕತೆ ಇಲ್ಲ. ಇದರ ಬಗ್ಗೆ ಯಾರಾದರು ನಮ್ಮಗೆ ಅಧಿಕೃವಾಗಿ ದೂರು ನೀಡಿದಲ್ಲಿ. ಅದನ್ನು ಸಂಬಂಧಿಸಿದ ಸಚಿವರ ಹಾಗೂ ಅಧಿಕಾರಿಗಳ ಗಮನಕ್ಕೆ ತರುವುದರ ಜೊತೆಗೆ ನಾನು ಕೂಡಾ ಪರಿಶೀಲನೆ ನಡೆಸುತ್ತೇವೆ ಎಂದರು.

ಗ್ರಾಮೀಣದಲ್ಲಿ ಕಳ್ಳತನ ಬಗ್ಗೆ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ:

ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳ ಕಳ್ಳತನ ಹಾಗೂ ವಾಹನಗಳ ಬ್ಯಾಟರಿ ಕಳ್ಳತನದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ಕುರಿತು ಕ್ರಮವಹಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಜರುಗಿಸಿ ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೆ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಮಗಾರಿಗಳಲ್ಲಿ ಅವ್ಯವಹಾರ ಮಾಡಲಾಗಿದೆ ಎಂಬ ದೂರುಗಳು ಸಹ ಕೇಳಿಬರುತ್ತಿವೆ. ಅವುಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ದ ಯಾರೇ ಆಗಿದ್ದರೂ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button