ಜಿಲ್ಲಾ ಸುದ್ದಿಮೈಸೂರು

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಮೈಸೂರು: ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪೊಲೀಸ್ ಕಾನ್ಸ್‌ಟೇಬಲ್ ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಗರದ ಎನ್.ಆರ್. ಠಾಣೆಯ ಕಾನ್ಸ್‌ಟೇಬಲ್ ಲೋಕೇಶ್ ಅಮಾನತುಗೊಂಡವರು. ಕರ್ತವ್ಯ ವೇಳೆ ದುರ್ನಡತೆ ಪ್ರದರ್ಶಿಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಅಮಾನತು ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಿದ್ದಲಿಂಗಪುರ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯುತ್ತಿದ್ದ ಷಷ್ಠಿ ಪೂಜೆಯ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್ ಸತೀಶ್ ಅವರನ್ನು ದೇಗುಲದ ಹೊರಗೆ ಅಡ್ಡ ಹಾಕಿದ ನರಸಿಂಹರಾಜ ಠಾಣೆಯ ಕಾನ್ಸ್‌ಟೇಬಲ್ ಲೋಕೇಶ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಲಾಠಿಯಿಂದ ಥಳಿಸಿ ನೆಲಕ್ಕೆ ಬೀಳಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದರು ಎನ್ನಲಾಗ್ತಿದೆ.

ಘಟನೆ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅಲ್ಲದೇ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರನ್ನು ಒತ್ತಾಯಿಸಲಾಗಿತ್ತು. ತನಿಖೆ ನಡೆಸಿದ ಆಯುಕ್ತರು ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಪೊಲೀಸ್ ಪೇದೆಯನ್ನ ಅಮಾನತು ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button