Breaking Newsಜಿಲ್ಲಾ ಸುದ್ದಿಮನರಂಜನೆರಾಮನಗರಸಿನಿಮಾಸೆಲೆಬ್ರಿಟಿ

ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ : ಲವ್ ಯು ರಚ್ಚು ಸಿನಿಮಾ ಚಿತ್ರೀಕರದಲ್ಲಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್​​ನ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಆದೇಶವನ್ನು ಹೊರಡಿಸಿದ್ದರಾರೆ.

ನಿನ್ನೆ ಬಿಡದಿಯಲ್ಲಿ ನಡೆದ ಚಿತ್ರದ ಶೂಟಿಂಗ್ ವೇಳೆ ನಡೆದ ಫೈಟರ್​​ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೋಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ದಾಖಲಾಗಿತ್ತು. ಲವ್​​ ಯೂ ರಚ್ಚು ಸಿನಿಮಾ ಚಿತ್ರದ ನಿರ್ದೇಶಕ ಶಂಕರಯ್ಯ, ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಚಿತ್ರದ ಉಸ್ತುವಾರಿ ಫರ್ನಾಂಡಿಸ್ ಹಾಗೂ ಚಿತ್ರದ ಕ್ರೇನ್ ಅಪರೇಟರ್ ಮಹದೇವ್​​ ವಿರುದ್ಧ ಬಿಡದಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.

ಐವರು ಆರೋಪಿಗಳ ಪೈಕಿ ಬಂಧಿತರಾದ ನಿರ್ದೇಶಕ ಶಂಕರಯ್ಯ, ವಿನೋದ್ ಕುಮಾರ್, ಮಹದೇವ್ ರವರನ್ನ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ನಿನ್ನೆ ರಾಮನಗರದ ಬಿಡದಿ ಬಳಿ ಲವ್​​ ಯೂ ರಚ್ಚು ಚಿತ್ರ ಚಿತ್ರೀಕರಣ ವೇಳೆ ವಿದ್ಯುತ್​ ಶಾಕ್ ನಿಂದ ಫೈಟರ್​ ವಿವೇಕ್ ಸಾವನ್ನಪ್ಪಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಆ.24 ವರೆಗೆ ನ್ಯಾಯಾಂಗ ಬಂದನ ವಿಧಿಸಿ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಹಾಕಲಾಯಿತು.

ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿಯಾಗಿದ್ದಾರೆ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರಾಗಿದ್ದಾರೆ. 

Spread the love

Related Articles

Leave a Reply

Your email address will not be published. Required fields are marked *

Back to top button