ಕಲಬುರ್ಗಿಜಿಲ್ಲಾ ಸುದ್ದಿ
ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಅನ್ಯ ಕೋಮಿನ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆಂಬ ಆರೋಪ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೇಳಿಬಂದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ವಿವಿಯ ಆವರಣದಲ್ಲಿ ನಿನ್ನೆ ರಾಮನವಮಿ ಆಚರಿಸಲಾಗಿದ್ದು, ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ವಿಶ್ವನಾಥ, ನರೇಂದ್ರ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಗಳಿಬ್ಬರು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ. ಹೀಗಾಗಿ ಘಟನೆ ಖಂಡಿಸಿ ಇಂದು ಎಬಿವಿಪಿ ವಿವಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.




