Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿರುವಂತೆ ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿದ್ದು, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅಂದಹಾಗೇ ರೌಡಿ ಶೀಟರ್ ಆಗಿದ್ದಂತ ಸೈಲೆಂಟ್ ಸುನೀಲ್ ಬಿಜೆಪಿ ನಾಯಕರನ್ನು ರಕ್ತದಾನ ಶಿಬಿರಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಿಸಿತ್ತು. ಅಲ್ಲದೇ ರೌಡಿಗಳ ತಾಣವಾಗುತ್ತಿದೆ ಬಿಜೆಪಿ ಎಂಬುದಾಗಿ ವಾಗ್ಧಾಳಿ ನಡೆಸಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಅವರು ಸೈಲೆಂಟ್ ಸುನಿಲ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈ ಬಳಿಕ ಈಗ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button