Latest

ಶಾಲೆ ಪುನರಾರಂಭದ ಬಗ್ಗೆ ಸುಳಿವು ನೀಡಿದ ಶಿಕ್ಷಣ ಸಚಿವ

ಕೋವಿಡ್ ಮೂರನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದ್ದು ಇದೀಗ ಶಾಲೆ ಪುನಾರಾರಂಭದ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುಳಿವು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬಂದ್ ಆಗಿರುವ ಕಡೆ ಶಾಲೆ ಪುನಾರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಶುಕ್ರವಾರ ನಡೆಯಲಿರುವ ಸಿಎಂ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಲ್ಲದೆ ಪಾಸಿಟಿವ್ ಕೇಸ್ ಹೆಚ್ಚಿರುವ ಕಡೆಗಳಲ್ಲಿ ಶಾಲೆ ಬಂದ್​ಗೆ ಸೂಚನೆ ನೀಡಲಾಗಿದ್ದು ಉಳಿದ ಕಡೆಗಳಲ್ಲಿ ಶಾಲೆಗಳನ್ನ ತೆರೆಯಲಾಗುವುದು ಎಂದು ನಾಗೇಶ್ ಹೇಳಿದ್ದಾರೆ.

ಶಾಲೆ ಬಂದ್ ಮಾಡುವುದು ಬೇಡ ಎಂದು ತಜ್ಞರು ಹೇಳಿದ್ದಾರೆ. ಕ್ಲಸ್ಟರ್ ಮಟ್ಟದಲ್ಲಿ ಶಾಲೆ ಬಂದ್​ಗೆ ತಜ್ಞರು ಸಲಹೆ ನೀಡಿದ್ದು, ರಾಜ್ಯಾದ್ಯಂತ ಶಾಲೆ ಬಂದ್ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button