Breaking NewsLatestಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ: ಬಿ ಎಸ್ ಯಡಿಯೂರಪ್ಪ

ಧಾರವಾಡ : ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ, ಸರಿಯಾದ ಸಾಕ್ಷಿ ಆಧಾರಗಳನ್ನು ಒಪ್ಪಿಸಿದರೇ ಪ್ರಧಾನಿ ಮೋದಿಯವರು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಮತ್ತು ದಾಖಲೆಯನ್ನು ಯಾವುದೇ ಪಕ್ಷದವರು ಕೊಟ್ಟರು ನಿಶ್ಚಿತವಾಗಿ ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ. ಯಾರೆ ಹಗರಣದಲ್ಲಿ ಭಾಗಿಯಾಗಿದ್ದರೂ ಅಂತವರನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲಾ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ:

ಇನ್ನೂ ಕಾಂಗ್ರೆಸ್​​ನಲ್ಲಿ ಎರಡು ಬಣಗಳಾಗಿವೆ ಎಂಬ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಾಮಾನ್ಯವಾಗಿ ನಾನು ಯಾವುದೇ ಪಕ್ಷದ ಬಗ್ಗೆಯೂ ಮಾತನಾಡುವುದಿಲ್ಲ. ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದ ಕುರಿತು ನಾನು ಯಾವುದೇ ಟೀಕೆ ಟಿಪ್ಪಣಿ ಮಾಡುವುದಿಲ್ಲ. ಕಾಂಗ್ರೆಸ್ ನಲ್ಲಿ ಎರಡು ಬಣಗಳು ಇರುವುದು ಈಗಾಗಲೇ ಜಗಜ್ಜಾಹೀರು ಆಗಿದೆ. ನಾನು ವಿರೋಧ ಪಕ್ಷದವರ ಕುರಿತು ಯಾವುದೆ ಹೇಳಿಕೆ ನೀಡುವುದಿಲ್ಲ ಎನ್ನುವ ಮೂಲಕ ವ್ಯಂಗ್ಯವಾಡಿದರು.

ನಾಲ್ಕು ತಂಡಗಳ ಮೂಲಕ ಜನಸ್ವರಾಜ್‌ಯಾತ್ರೆ :

ನಾಲ್ಕು ತಂಡಗಳ ಮೂಲಕ ಜನಸ್ವರಾಜ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಜಗದೀಶ್ ಶೆಟ್ಟರ್, ಸಚಿವ ಕೆ ಎಸ್.ಈಶ್ವರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿಕೊಂಡು ನಮ್ಮ ನೇತೃತ್ವದಲ್ಲಿ ನಾಲ್ಕು ತಂಡಗಳಾಗಿ ಜನಸ್ವರಾಜ್ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಇನ್ನೂ ಅದೆ ರೀತಿ ನಾನು ಎಂಟು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದೇನೆ. ಜನಸ್ವರಾಜ್ ಯಾತ್ರೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಹ ಭಾಗಿಯಾಗುತ್ತಾರೆ ಎಂದರು.

ಇನ್ನೂ ರಾಜ್ಯದಲ್ಲಿ ಡಿಸೆಂಬರ್ 10 ರಂದು ನಡೆಯಲಿರುವ ರಾಝ್ಯ 25 ವಿಧಾನಪರಿಷತ್ ಚುನಾವಣೆಗೆ ಈಗಾಗಲೆ ಪಕ್ಷದಿಂದ ಸಿದ್ದತೆ ನಡೆಸಲಾಗುತ್ತಿದೆ. ಗೆಲ್ಲುವ ವಿಶ್ವಾಸವೂ ಇದೆ. ಈಗ ನಾನು ಉತ್ತರ ಕನ್ನಡ ಪ್ರವಾಸ ಮುಗಿಸಿ ನಂತರ ಹಾವೇರಿ, ಗದಗ, ಬಾಗಲಕೋಟೆ, ಬಿಜಾಪುರ, ಚಿಕ್ಕೊಡಿ, ಬೆಳಗಾವಿ, ಧಾರವಾಡಗಳಲ್ಲಿ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button