Latestಜಿಲ್ಲಾ ಸುದ್ದಿಹಾಸನ
ಒಂದೇ ಕುಟುಂಬ ಮೂವರು ಆತ್ಮಹತ್ಯೆ; ಯಾಕೆ ಗೊತ್ತಾ?

ಹಾಸನ: ಜಿಲ್ಲೆಯ ಹೇಮಾವತಿ ನಗರದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಸತ್ಯಪ್ರಸಾದ್ (54), ಅನ್ನಪೂರ್ಣ (50) ಗೌರವ್ (21) ಮೃತ ದುರ್ದೈವಿಗಳು. ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಘಟನೆಗೆ ನಿಖರವಾದ ಕಾರಣವೇನು ಎಂದು ತಿಳಿದುಬಂದಿಲ್ಲ. ತನಿಖೆ ನಂತರ ಸ್ಪಷ್ಟವಾಗಿ ತಿಳಿದುಬರಲಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



