Breaking NewsLatestಜಿಲ್ಲಾ ಸುದ್ದಿದಾವಣಗೆರೆಸುದ್ದಿ

ಸಂಕ್ರಾಂತಿಯಂದು ತುಂಗಾಭದ್ರಾ ಆರತಿ ಮಂಟಪ ಉದ್ಘಾಟನೆ

ದಾವಣಗೆರೆ: ಕಾಶಿಯ ಗಂಗಾ ಆರತಿ ಮಾದರಿ ದಕ್ಷಿಣ ಭಾರತದ ಹರಕ್ಷೇತ್ರ ಹರಿಹರದಲ್ಲಿ ನಿರ್ಮಿಸಲು ಯೋಜಿಸಿರುವ ತುಂಗಾಭದ್ರಾ ಆರತಿ ಮಂಟಪಗಳ ನಿರ್ಮಾಣ ಕಾರ್ಯದ ಉದ್ಘಾಟನಾ ಕಾರ್ಯಕ್ರಮ ಜನವರಿ  14ರಂದು ನಡೆಯಲಿದೆ.  ಮುಖ್ಯಮಂತ್ರಿ ಬಸವರಾಜ್ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.ನೆರವೇರಿಸಲಿದ್ದಾರೆ. ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ತುಂಗಭದ್ರಾ ಆರತಿ ಮಂಟಪಗಳ ನೀಲಿ ನಕ್ಷೆಯ ಬಗ್ಗೆ ಹರಕ್ಷೇತ್ರ ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮೀಜಿ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು. ನೀಲಿನಕ್ಷೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿಗೆ ತೋರಿಸಿದರು.

ಇತ್ತೀಚೆಗೆ ಕಾಶಿಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ  ತಾವು ಕಾಶಿಯಲ್ಲಿ ನೋಡಿದ ಗಂಗಾ ಆರತಿಯ ಕೆಲ ಅಂಶಗಳನ್ನು ಈ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ  ಮಲ್ಲಿಕಾರ್ಜುನ ಬಿ. ಗುಂಗೆ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button